ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಗಳು ಇದೀಗ 13ನೇ ವಾರದ ಅಂತ್ಯದಲ್ಲಿದ್ದು, ಫಿನಾಲೆ ಹಂತಕ್ಕೆ ತಲುಪಲು ನಾ ಮುಂದು ತಾ ಮುಂದು ಎಂಬ ಜಿದ್ದಾಜಿದ್ದಿಯನ್ನು ನಡೆಸುತ್ತಿದ್ದಾರೆ. ಈ ಮಧ್ಯೆ ಒಬ್ಬರಿಗೊಬ್ಬರು ತಮ್ಮ ಮಾತುಗಳಲ್ಲೇ ಎದುರಾಳಿಗಳೊಂದಿಗೆ ಪೈಪೋಟಿ ಮಾಡುತ್ತಿದ್ದಾರೆಯೇ ವಿನಃ ಟಾಸ್ಕ್ನಲ್ಲಿ ತೋರುವಲ್ಲಿ ಕೊಂಚ ವಿಫಲವಾಗುತ್ತಿದ್ದಾರೆ. ಸದ್ಯ ಎಂದಿನಂತೆ ಮನೆಯೊಳಗಿನ ವಾಗ್ವಾದ ಈ ಸೀಸನ್ ಅಂತ್ಯವಾಗುವವರೆಗೂ ಮುಗಿಯುವುದಿಲ್ಲ ಎಂಬಂತೆ ಕಾಣಿಸುತ್ತಿದ್ದು, ಫೈನಲ್ ಹಂತದಲ್ಲಿ ಯಾವೆಲ್ಲಾ ತಿರುವುಗಳನ್ನು ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕು. ಇದೆಲ್ಲದರ ನಡುವೆ ಕಳಪೆ-ಉತ್ತಮ ಪೈಕಿ ವರ್ತೂರು ಸಂತೋಷ್ ಧ್ವನಿ ಏರಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್; ಹವಾಮಾನ ಇಲಾಖೆಯಿಂದ ಮುನ್ಸೂಚನೆ..!
ಬಿಗ್ ಬಾಸ್ ಮನೆಯೊಳಗೆ ವಾರಾಂತ್ಯ ಸಮೀಪಿಸುತ್ತಿದ್ದಂತೆ ಕಳಪೆ-ಉತ್ತಮ ಅನ್ನೋ ಹಾವು-ಏಣಿ ಆಟ ಮತ್ತೆ ಶುರುವಾಗಿದೆ. ಈ ವಾರ ಬಹುಮಾನದ ಮೊತ್ತವನ್ನು ಗಳಿಸುವ ಟಾಸ್ಕ್ ಅನ್ನು ಬಿಗ್ ಬಾಸ್ ಮನೆಯ ಸದಸ್ಯರಿಗೆ ನೀಡಿದ್ದರು. ಈ ಚಟುವಟಿಕೆಗಳಲ್ಲಿ ಆಡುವ ಅವಕಾಶಕ್ಕಾಗಿ ಮಾತಿನ ಚಕಮಕಿಗಳೂ ನಡೆದಿದ್ದವು. ಈಗ ಅವೆಲ್ಲ ಮುಗಿದು ಈ ವಾರದ ಕಳಪೆ ಹಾಗೂ ಉತ್ತಮ ಯಾರು? ಎಂಬುದನ್ನು ನಿರ್ಧರಿಸುವ ಹಂತ ಬಂದಿದೆ.
ಕಾರ್ತಿಕ್ ವರ್ತೂರು ಸಂತೋಷ್ಗೆ ಕಳಪೆ ನೀಡಿದ್ದರೆ, ತನಿಷಾ, ಮೈಕಲ್ ಕಳಪೆ ಪ್ರದರ್ಶನ ನೀಡಿದ್ದಾರೆ ಎಂದು ಹೇಳಿದ್ದಾರೆ. ಒಟ್ಟಾರೆ ಮನೆಯ ಸದಸ್ಯರ ಬಾಯಲ್ಲಿ ಮೈಕಲ್ ಮತ್ತು ಸಂತೋಷ್ ಹೆಸರೇ ಹೆಚ್ಚು ಸಲ ಬಂದಂತಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ವರ್ತೂರು, ‘ಐದು ಲಕ್ಷದ ಟಾಸ್ಕ್ನಲ್ಲಿ ರಿಸ್ಕ್ ತೆಗೆದುಕೊಂಡು ಆಡಿದ್ದೀನಿ. ನಾನೇನೂ ಸ್ಫೋರ್ಟ್ಸ್ ಫೀಲ್ಡಿಂದ ಬಂದವನಲ್ಲ, ಆದರೆ ಎತ್ತು, ದನಗಳನ್ನು ಪರಿಗಣಿಸಿದರೆ ಸ್ಫೋರ್ಟ್ಸ್ ಹುಟ್ಟುಹಾಕಿದ್ದೇ ನಾವು’ ಎಂದು ಖಡಕ್ಕಾಗಿ ಹೇಳಿದ್ದಾರೆ.
ಇದನ್ನೂ ಓದಿ: ಬಾಯ್ಫ್ರೆಂಡ್ ಶಿಖರ್ ಪಹಾರಿಯಾ ಜೊತೆ ತಿರುಪತಿ ಬಾಲಾಜಿ ದರ್ಶನ ಪಡೆದ ಜಾಹ್ನವಿ ಕಪೂರ್!
ಒಟ್ಟಾರೆ ಈ ವಾರದ ಕಳಪೆ ಮತ್ತು ಉತ್ತಮ ಯಾರು ಎಂಬುದು ಪ್ರಶ್ನಾರ್ಥಕವಾಗಿಯೇ ಉಳಿದಿದೆ. ಅದಕ್ಕೆ ಉತ್ತರ ಸಿಗಲು ಇಂದಿನ ಸಂಚಿಕೆ ವೀಕ್ಷಿಸಬೇಕಿದೆ. ದಿನದ 24 ಗಂಟೆಗಳ ಲೈವ್ ಸ್ಟ್ರೀಮಿಂಗ್ ಜಿಯೋ ಸಿನಿಮಾದಲ್ಲಿ ಪ್ರಸಾರವಾಗುತ್ತಿದೆ.