ಬೆಂಗಳೂರು: ಈ ಹಿಂದೆ ‘ಪುಟಾಣಿ ಸಫಾರಿ’ ಮತ್ತು ‘ವರ್ಣಮಯ’ ಚಿತ್ರಗಳನ್ನು ನಿರ್ದೇಶಿಸಿದ್ದ ರವೀಂದ್ರ ವಂಶಿ, ಈಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರಕ್ಕೆ ‘ವಾಸಂತಿ ನಲಿದಾಗ’ ಎಂಬ ಹೆಸರಿಡಲಾಗಿದ್ದು, ಸದ್ಯದಲ್ಲೇ ಚಿತ್ರ ರಾಜ್ಯದ್ಯಂತ ಬಿಡಗುಡೆಯಾಗಲಿದೆ.
ಇದನ್ನೂ ಓದಿ: ಪ್ಯಾನ್ ಇಂಡಿಯಾ ಸಿನಿಮಾ ಮೊದಲೇ ಇತ್ತು ಎಂದ ಕಮಲ್ ಹಾಸನ್: ಕೆಜಿಎಫ್-2, ಆರ್ಆರ್ಆರ್ ಬಗ್ಗೆ ಅಚ್ಚರಿ ಹೇಳಿಕೆ
ರೋಹಿತ್ ಶ್ರೀಧರ್ ನಾಯಕನಾಗಿ ಹಾಗೂ ಭಾವನಾ ಶ್ರೀನಿವಾಸ್, ಜೀವಿತ ವಸಿಷ್ಠ ನಾಯಕಿಯರಾಗಿರುವ ಈ ಚಿತ್ರದಲ್ಲಿ ಸಾಯಿಕುಮಾರ್ ಮತ್ತು ಸುಧಾರಾಣಿ ಸಹ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಚಿತ್ರದ ಕುರಿತು ಮಾತನಾಡುವ ಸಾಯಿಕುಮಾರ್, ‘ನಿಜವಾಗಲೂ ಸಂತೋಷವಾಗುತ್ತಿದೆ. ಸುಧಾರಾಣಿ ಕನ್ನಡದಲ್ಲಿ ನನ್ನ ಮೊದಲ ಜೋಡಿ ಆಗಿದ್ದವರು. ಈ ಸಿನಿಮಾದಲ್ಲೂ ಮತ್ತೆ ಜೋಡಿಯಾಗಿ ನಟಿಸುತ್ತಿದ್ದೇವೆ. ನಾನು ಈ ಚಿತ್ರದಲ್ಲಿ ಬ್ಯುಸಿನೆಸ್ ಮ್ಯಾನ್ ಪಾತ್ರ ಮಾಡುತ್ತಿದ್ದೇನೆ. ಮಗ ಅಂದರೆ ಬಹಳ ಇಷ್ಟ. ‘ವಾಸಂತಿ ನಲಿದಾಗ’ ಎಂಬ ಶೀರ್ಷಿಕೆಯೇ ಬಹಳ ಚೆನ್ನಾಗಿದೆ’ ಎಂದು ಖುಷಿ ವ್ಯಕ್ತಪಡಿಸಿದರು.
ಚಿತ್ರದ ಇನ್ನೊಂದು ವಿಶೇಷತೆಯೆಂದರೆ, ‘ಬಿಗ್ ಬಾಸ್’ ಖ್ಯಾತಿಯ ಪಂಜು ಪಾವಗಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವುದು. ತಮ್ಮ ಪಾತ್ರದ ಕುರಿತು ಮಾತನಾಡುವ ಅವರು, ‘ಈ ಚಿತ್ರದಲ್ಲಿ ಒಂದೊಳ್ಳೆಯ ಪಾತ್ರ ಕೊಟ್ಟಿದ್ದಾರೆ. ಸಿನಿಮಾದಲ್ಲಿ ಅದ್ಭುತ ಸನ್ನಿವೇಶಗಳಿವೆ. ಡೈಲಾಗ್ ತುಂಬಾ ಚೆನ್ನಾಗಿವೆ. ಇಷ್ಟೆಲ್ಲಾ ಸೀನ್ ಮಾಡಿದ್ರೂ ಹೀರೋಯಿನ್ ಕಾಣಿಸಿಲ್ಲ. ಆಮೇಲೆ ನಂಬರ್ ಕೊಟ್ರೆ ಕಷ್ಟಸುಖ ಮಾತಾಡೋಣಾ’ ಎಂದು ತಮಾಷೆ ಮಾಡುತ್ತಾರೆ.
ಜೇನುಗೂಡು ಸಿನಿಮಾ ಬ್ಯಾನರ್ನಡಿ ಕೆ.ಎನ್ ಶ್ರೀಧರ್ ನಿರ್ಮಾಣ ಮಾಡಿರುವ ‘ವಾಸಂತಿ ನಲಿದಾಗ’ ಚಿತ್ರದಲ್ಲಿ ಸುಧಾರಾಣಿ, ಸಾಧು ಕೋಕಿಲ, ಮಿಮಿಕ್ರಿ ಗೋಪಿ ಸೇರಿದಂತೆ ಒಂದಷ್ಟು ಅನುಭವಿ ಕಲಾವಿದರು ಅಭಿನಯಿಸಿದ್ದಾರೆ.
ಇದನ್ನೂ ಓದಿ: ನೀವು ಒಂಟಿಯಾಗೇ ಸಾಯುತ್ತೀರಿ… ನೆಟ್ಟಿಗನ ಕಾಮೆಂಟ್ಗೆ ಸಮಂತಾ ಕೊಟ್ಟ ಖಡಕ್ ಉತ್ತರ ಹೀಗಿತ್ತು…
ರೋಮ್ಯಾಂಟಿಕ್ ಕಥಾಹಂದರ ಹೊಂದಿರುವ ‘ವಾಸಂತಿ ನಲಿದಾಗ’ ಚಿತ್ರಕ್ಕೆ ಶ್ರೀಗುರು ಸಂಗೀತವಿದ್ದು, ಪ್ರಮೋದ್ ಭಾರತೀಯ ಛಾಯಾಗ್ರಾಹಣವಿದೆ.
ದೇಶಾದ್ಯಂತ ಕೇವಲ 20 ಟಿಕೆಟ್ ಮಾರಾಟ: ಕಂಗನಾರ ಧಾಕಡ್ ಚಿತ್ರದ 8ನೇ ದಿನದ ಕಲೆಕ್ಷನ್ ಕೇಳಿದ್ರೆ ಬೆರಗಾಗ್ತೀರಾ!