ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗಾರಾಜ್ ಅವರ ಪತ್ನಿ ಜ್ಞಾನಾಂಬಿಕೆ (60) ಕಿಡ್ನಿ ವೈಫಲ್ಯದಿಂದ ಇಂದು ನಿಧನರಾದರು.
ಶೇಷಾದ್ರಿಪುರಂನ ಆಸ್ಪತ್ರೆಯಲ್ಲಿ ಸಂಜೆ 7.30ರ ಹೊತ್ತಿಗೆ ನಿಧನರಾಗಿದ್ದಾರೆ. ಅವರ ಮೃತದೇಹವನ್ನು ಡಾಲರ್ಸ್ ಕಾಲನಿಯಲ್ಲಿರುವ ವಾಟಾಳ್ ನಾಗರಾಜ್ ಅವರ ಮನೆಗೆ ಕೊಂಡೊಯ್ಯಲಾಗುವುದು.
ಬುಧವಾರ (ಆಗಸ್ಟ್ 5) ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಪಾರ್ಥಿವ ಶರೀರವನ್ನು ಕೊಂಡೊಯ್ದು ಮೈಸೂರಿನ ನಂಜನಗೂಡು ತಾಲೂಕಿನಲ್ಲಿರುವ 16 ಗ್ರಾಮದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಇಂದಿನವರೆಗೆ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಸಂಗ್ರಹಿಸಿದ್ದು 30 ಕೋಟಿ ರೂ.ದೇಣಿಗೆ