ಬಾಗಲಕೋಟೆ: ನಾಳೆ ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಹೊರಟಿದ್ದ ವಾಹನವೊಂದು ಅಪಘಾತಕ್ಕೀಡಾಗಿ ಒಬ್ಬರು ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಈ ಭೀಕರ ಅಪಘಾತ ಸಂಭವಿಸಿದೆ.
ಸಿದ್ಧರಾಮೋತ್ಸವಕ್ಕಾಗಿ ದಾವಣಗೆರೆಗೆ ತೆರಳುತ್ತಿದ್ದ ಕ್ರೂಸರ್ ವಾಹನ ಬಾದಾಮಿ ತಾಲೂಕಿನ ಹೂಲಗೇರಿ ಸಮೀಪ ಅಪಘಾತಕ್ಕೀಡಾಗಿದೆ. ಪರಿಣಾಮವಾಗಿ, ಬೀಳಗಿ ತಾಲೂಕಿನ ಚಿಕ್ಕ ಆಲಗುಂಡಿ ಗ್ರಾಮದ ಪ್ರಕಾಶ್ ಕಂಬಾರ (35) ಸಾವಿಗೀಡಾಗಿದ್ದಾರೆ.
ಪ್ರಕಾಶ್ ಕಂಬಾರ ವಾಹನ ಚಲಾಯಿಸುತ್ತಿದ್ದರು. ಗಂಭೀರವಾಗಿ ಗಾಯಗೊಂಡಿರುವವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆರೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ತಿಗಣೆ ಮದ್ದಿಗೆ ಬಲಿಯಾದ್ಲು 6 ವರ್ಷದ ಬಾಲಕಿ; ನಿಜಕ್ಕೂ ಆಗಿದ್ದೇನು? ತಪ್ಪಿತಸ್ಥರು ಯಾರು?