ಸಿದ್ದರಾಮೋತ್ಸವಕ್ಕೆ ಹೊರಟ ವಾಹನ ಅಪಘಾತ; ಒಂದು ಸಾವು, ನಾಲ್ವರಿಗೆ ಗಂಭೀರ ಗಾಯ..

ಬಾಗಲಕೋಟೆ: ನಾಳೆ ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಹೊರಟಿದ್ದ ವಾಹನವೊಂದು ಅಪಘಾತಕ್ಕೀಡಾಗಿ ಒಬ್ಬರು ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಈ ಭೀಕರ ಅಪಘಾತ ಸಂಭವಿಸಿದೆ. ಸಿದ್ಧರಾಮೋತ್ಸವಕ್ಕಾಗಿ ದಾವಣಗೆರೆಗೆ ತೆರಳುತ್ತಿದ್ದ ಕ್ರೂಸರ್ ವಾಹನ ಬಾದಾಮಿ ತಾಲೂಕಿನ ಹೂಲಗೇರಿ ಸಮೀಪ ಅಪಘಾತಕ್ಕೀಡಾಗಿದೆ. ಪರಿಣಾಮವಾಗಿ, ಬೀಳಗಿ ತಾಲೂಕಿನ ಚಿಕ್ಕ ಆಲಗುಂಡಿ ಗ್ರಾಮದ ಪ್ರಕಾಶ್ ಕಂಬಾರ (35) ಸಾವಿಗೀಡಾಗಿದ್ದಾರೆ. ಪ್ರಕಾಶ್​ ಕಂಬಾರ ವಾಹನ ಚಲಾಯಿಸುತ್ತಿದ್ದರು. ಗಂಭೀರವಾಗಿ ಗಾಯಗೊಂಡಿರುವವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆರೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ … Continue reading ಸಿದ್ದರಾಮೋತ್ಸವಕ್ಕೆ ಹೊರಟ ವಾಹನ ಅಪಘಾತ; ಒಂದು ಸಾವು, ನಾಲ್ವರಿಗೆ ಗಂಭೀರ ಗಾಯ..