More

    ಮದುವೆಗೆ ಹೊರಟಿದ್ದವರ ಮರಣ: ಭೀಕರ ಅಪಘಾತದಲ್ಲಿ ಬಾಲಕಿಯರಿಬ್ಬರು ಸ್ಥಳದಲ್ಲೇ ಸಾವು; 10ಕ್ಕೂ ಅಧಿಕ ಮಂದಿಗೆ ಗಾಯ

    ಮೈಸೂರು: ಮದುವೆ ಮಂಟಪಕ್ಕೆ ತೆರಳುತ್ತಿದ್ದ ವಾಹನ ಭೀಕರ ಅಪಘಾತಕ್ಕೆ ಒಳಗಾಗಿ ಬಾಲಕಿಯರಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕೆ.ಆರ್.ನಗರ ತಾಲೂಕಿನ ಹೊಸೂರು-ಹಳಿಯೂರು ರಸ್ತೆಯಲ್ಲಿ ಇಂದು ರಾತ್ರಿ ಈ ಅಪಘಾತ ಸಂಭವಿಸಿದೆ. ಮೈಸೂರು ಜಿಲ್ಲೆಯ ಶ್ರೀರಾಮಪುರದಲ್ಲಿ ನಾಳೆ ನಡೆಯಲಿರುವ ಮದುವೆಗೆ ಇವರೆಲ್ಲ ಕುಪ್ಪೆ ಗ್ರಾಮದಿಂದ ಟಾಟಾ ಏಸ್​ ವಾಹನದಲ್ಲಿ ಹೊರಟಿದ್ದರು. ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಏಸ್​ ವಾಹನ ಮೂರು ಬಾರಿ ಪಲ್ಟಿ ಹೊಡೆದಿದ್ದು, ಕಟ್ಟೆಪುರ ನಾಲೆಗೆ ಉರುಳಿದೆ.

    ಮದುವೆಗೆ ಹೊರಟಿದ್ದವರ ಮರಣ: ಭೀಕರ ಅಪಘಾತದಲ್ಲಿ ಬಾಲಕಿಯರಿಬ್ಬರು ಸ್ಥಳದಲ್ಲೇ ಸಾವು; 10ಕ್ಕೂ ಅಧಿಕ ಮಂದಿಗೆ ಗಾಯ
    ಸ್ಥಳದಲ್ಲೇ ಮೃತಪಟ್ಟ ಬಾಲಕಿ

    ಪರಿಣಾಮ ವಾಹನದಲ್ಲಿದ್ದ ಕುಪ್ಪೆ ಗ್ರಾಮದ ಕೃಷ್ಣಯ್ಯ ಎಂಬವರ ಪುತ್ರಿರಾದ ಪುಷ್ಪಲತಾ (10), ಪಲ್ಲವಿ (9) ಸ್ಥಳದಲ್ಲೇ ಮೃತಪಟ್ಟರು. ಇತರ ಹತ್ತು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕೆ.ಆರ್.ನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ.ಆರ್.ನಗರ, ಚುಂಚಕಟ್ಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

    ನಾಳೆಯಿಂದ ರಾಜ್ಯದಲ್ಲಿ ಮಳೆ; ಹವಾಮಾನ ಇಲಾಖೆ ಮೂನ್ಸೂಚನೆ..

    ಕರೊನಾ ಎರಡನೇ ಅಲೆಯ ತೀವ್ರತೆ ಹೆಚ್ಚಳ; ಒಂದೇ ದಿನ 3,082 ಮಂದಿಯಲ್ಲಿ ಸೋಂಕು ಪತ್ತೆ!

    ನಾನು ನೀವು ಹೋಗಿ ಅವರ ಬಟ್ಟೆ ಬಿಚ್ಚಿದ್ವಾ? ಆ ಯಪ್ಪ ಎದುರಿಗೆ ಸಿಕ್ಕಾಗ ಏನು ಹೇಳಬೇಕೋ ಹೇಳುತ್ತೇನೆ: ಸಿಡಿ ಕೇಸ್​ ಬಗ್ಗೆ ಡಿ.ಕೆ. ಸುರೇಶ್ ಸಿಡಿಮಿಡಿ

    ಎರಡನೇ ಮದ್ವೆ ಆಗಲು ಹೊರಟವನನ್ನು ಸ್ಥಳಕ್ಕೇ ತೆರಳಿ ತಡೆದ ಪತ್ನಿ; ಠುಸ್ ಆಯ್ತು ಒಬ್ಳಿಗೆ ಕೈಕೊಟ್ಟು ಇನ್ನೊಬ್ಬಳ ಕೈಹಿಡಿಯೋ ಯತ್ನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts