ಬೆಂಗಳೂರು: ಟೊಮ್ಯಾಟೋ ತುಂಬಿದ್ದ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಎಂಸಿ ಯಾರ್ಡ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಭಾಸ್ಕರ್ ಹಾಗೂ ಆತನ ಪತ್ನಿ ಸಿಂಧುಜಾ ಎಂದು ಗುರುತಿಸಲಾಗಿದೆ. ರಾಕಿ, ಮಹೇಶ್ ಹಾಗೂ ಕುಮಾರ್ ಎಸ್ಕೇಪ್ ಆಗಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಸಿಂಧುಜಾ ಹಾಗೂ ಭಾಸ್ಕರ್, ಕಳ್ಳತನ ಮಾಡಲು ರಾಕಿ ಮನೆಯಲ್ಲಿ ಪ್ಲ್ಯಾನ್ ಮಾಡಿದ್ದರು. ಟೊಮ್ಯಾಟೋ ದುಬಾರಿ ಆಗಿರುವ ಹಿನ್ನೆಲೆಯಲ್ಲಿ ಯಶವಂತಪುರದ ಆರ್ಎಂಸಿ ಯಾರ್ಡ್ ಬಳಿಯಿಂದ ಟೊಮ್ಯಾಟೋ ತುಂಬಿದ್ದ ಗೂಡ್ಸ್ ವಾಹನವನ್ನು ಕದ್ದು, ಪರಾರಿಯಾಗಿದ್ದರು. ಬಳಿಕ ಚೆನ್ನೈ ಮಾರುಕಟ್ಟೆಯಲ್ಲಿ ಟೊಮ್ಯಾಟೋ ಮಾರಾಟ ಮಾಡಿದ್ದರು. ಇದಾದ ಬಳಿಕ ಖಾಲಿ ವಾಹನವನ್ನು ತಂದು ಪೀಣ್ಯ ಬಳಿ ನಿಲ್ಲಿಸಿ, ಬೇರೆ ಕಾರಿನಲ್ಲಿ ಎಸ್ಕೇಪ್ ಆಗಿದ್ದರು.
ಈ ಸಂಬಂಧ ವಾಹನ ಮಾಲೀಕ ಮತ್ತು ಟೊಮ್ಯಾಟೋ ರೈತ ದೂರು ದಾಖಲಿಸಿದ್ದ. ತನಿಖೆ ಆರಂಭಿಸಿದ ಪೊಲೀಸರಿಗೆ ಆರೋಪಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಆರೋಪಿಗಳು ಪರಾರಿಯಾಗಿದ್ದರಿಂದ ಪೊಲೀಸರಿಗೆ ಈ ಪ್ರಕರಣ ತಲೆನೋವಾಗಿ ಪರಿಣಮಿಸಿತ್ತು. ಕೊನೆಗೂ ಸಿಸಿಟಿವಿಯನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿ, ಕೊನೆಗೂ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ಇಬ್ಬರು ಹೆಣ್ಣುಮಕ್ಕಳ ಜತೆ ಬಾವಿಗೆ ಹಾರಿದ ತಾಯಿ: ಓರ್ವ ಬಾಲಕಿ ಪಾರು, ಚಿಕ್ಕಬಳ್ಳಾಪುರದಲ್ಲಿ ಕರುಣಾಜನಕ ಘಟನೆ
ಆಗಸ್ಟ್ 1ರಿಂದ ಹಾಲಿನ ದರ ಏರಿಕೆ ಬರೆ: ನಂದಿನಿ ಹಾಲಿನ ದರ ಎಷ್ಟೆಷ್ಟು ಹೆಚ್ಚಾಗಲಿದೆ? ಇಲ್ಲಿದೆ ಮಾಹಿತಿ…