ಬೆಂಗಳೂರು: ಅಗತ್ಯ ವಸ್ತುಗಳನ್ನು ತರಲು ವಾಹನ ಬಳಸಬಹುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಲಾಕ್ಡೌನ್ ಬಗ್ಗೆ ಇದ್ದ ಗೊಂದಲದ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಲಾಕ್ಡೌನ್ ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ದಿನಸಿ, ತರಕಾರಿ ಸೇರಿದಂತೆ ಅಗತ್ಯವಸ್ತು ಖರೀದಿಸಲು ವಾಹನ ಬಳಸಬಹುದು ಎಂದು ಡಿಜಿಪಿ ಕಚೇರಿ ಸೋಮವಾರ ಸಂಜೆ ಈ ಕುರಿತು ಟ್ವೀಟ್ ಮಾಡಿದೆ.
ತರಕಾರಿ, ದಿನಸಿ, ಅಗತ್ಯ ವಸ್ತುಗಳನ್ನು ತರಲು ವಾಹನ ಬಳಕೆ ಮಾಡಲು ಅನುಮತಿ ನೀಡಲಾಗಿದೆ, ನಿಮ್ಮ ಊರಿನ ಸಮೀಪ ಸುತ್ತಮುತ್ತಲೂ ತರಕಾರಿ, ದಿನಸಿ ತರಲು ವಾಹನ ಬಳಸಬಹುದು ಎಂದು ಟ್ವೀಟ್ನಲ್ಲಿ ಸ್ಪಷ್ಟಪಡಿಸಲಾಗಿದೆ. ಅಗತ್ಯವಸ್ತು ಖರೀದಿಸಲು ವಾಹನ ಬಳಸಬಹುದು, ಅನಗತ್ಯ ತಿರುಗಾಟಕ್ಕೆ ಅಲ್ಲ ಎಂದು ಡಿಜಿಪಿ ಟ್ವೀಟ್ ಮಾಡಿದೆ.
To buy groceries,vegetables and daily needs there is NO BAR for using vehicle to yr neighbour hood shop in cities or nearest availability point in rural areas. Use this facility with discretion & not as a licence for free run everyday. Stay at home for your own safety.
— DGP KARNATAKA (@DgpKarnataka) May 10, 2021
ರಾಜ್ಯ ಸರ್ಕಾರ 14 ದಿನ ಲಾಕ್ ಡೌನ್ ವಿಧಿಸಿ ಹೊರಡಿಸಿದ ಮಾರ್ಗಸೂಚಿಯಲ್ಲಿ ಹತ್ತಿರದಲ್ಲಿ ತರಕಾರಿ, ದಿನಸಿ ತರಲು ನಡೆದುಕೊಂಡೇ ಹೋಗಬೇಕು ಎಂದು ಷರತ್ತು ಹಾಕಲಾಗಿತ್ತು.