More

    ಸಾರ್ಥಕತೆಯೊಂದಿಗೆ ಮನುಕುಲದ ಉದ್ದಾರಕ್ಕಾಗಿ ಮಹಾ ಯೋಗಿಯಾದ ವೇಮನರು: ಉಷಾ ದಾಸರ

    ಮಹಾಯೋಗಿ ವೇಮನ ಜಯಂತಿ!

    ಗದಗ: ಆಸೆ-ಆಮಿಷಗಳಿಗೆ ಒಳಪಟ್ಟು ಭೋಗಿಯಾದಂತಹ ವೇಮನರು ತ್ಯಾಗ ಜೀವನದ ಸಾರ್ಥಕತೆಯೊಂದಿಗೆ ಮನುಕುಲದ ಉದ್ಧಾರಕ್ಕಾಗಿ ಮಹಾ ಯೋಗಿಯಾದರು ಎಂದು ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ನುಡಿದರು.

    ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಶುಕ್ರವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಜರುಗಿ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ಮಹಾಯೋಗಿ ವೇಮನರು ಶ್ರೇಷ್ಠ ವಚನಕಾರ, ಕವಿ, ಸಮಾಜ ಚಿಂತಕರು, ಮಾನವ ಕುಲದ ಏಳಿಗೆಗಾಗಿ ಶ್ರಮಿಸಿದ ಮಹಾಯೋಗಿಯಾಗಿದ್ದರು. ಅವರು ಸಾರ್ವಕಾಲಿಕ ದಾರ್ಶನಿಕರಾಗಿದ್ದು ಅವರ ತತ್ವ ಸಿದ್ಧಾಂತಗಳು ಇಂದಿಗೂ ಮಾದರಿಯಾಗಿವೆ.  ಇಂದಿನ ಯುವ ಪೀಳಿಗೆಗೆ ಮಹಾ ಯೋಗಿ ವೇಮನರ ತತ್ವ ಸಿದ್ಧಾಂತಗಳನ್ನು ತಿಳಿಸುವ ಕಾರ್ಯವಾಗಬೇಕಾಗಿದೆ ಎಂದರು.

    ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಮಾತನಾಡಿ ಸಾಮಾಜಿಕ ಸಮಸ್ಯೆಗಳನ್ನು ತೊಡೆದು ಹಾಕಲು ಹಾಗೂ ಸಾಮಾಜಿಕ ಸಮಾನತೆ ತರಲು ಅನೇಕ ದಾರ್ಶನಿಕರು ಶ್ರಮಿಸಿದ್ದಾರೆ. ಅಂತಹವರಲ್ಲಿ ಮಹಾಯೋಗಿ ವೇಮನರು ಒಬ್ಬರಾಗಿದ್ದಾರೆ. ಕನ್ನಡದಲ್ಲಿ ಸರ್ವಜ್ಞ, ತಮಿಳಿನ ತಿರುವಳ್ಳುವರ್ ಅವರಂತೆ ತೆಲುಗಿಗೆ ವೇಮನರು ಮಹಾಯೋಗಿಯಾಗಿದ್ದಾರೆ. ವೇಮನರು ಪದ್ಯಗಳ ಮೂಲಕ ಜನ ಸಾಮಾನ್ಯರಿಗೆ ತಿಳುವಳಿಕೆ ನೀಡಿದ್ದು ಅವರ ತತ್ವಾದರ್ಶಗಳು ಸಾರ್ವಕಾಲಿಕವಾಗಿವೆ ಎಂದರು.

    ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಕನ್ನಡ ಪ್ರಾಧ್ಯಾಪಕ ಡಾ.ರಮೇಶ ಕಲ್ಲನಗೌಡರ ಅವರು ಮಹಾಯೋಗಿ ವೇಮನರ ಜೀವನ ಮತ್ತು ಸಂದೇಶಗಳ ಕುರಿತು ಮಾತನಾಡಿ ಮಹಾಯೋಗಿ ವೇಮನರು ಭೋಗ ಜೀವನದ ದಾಸರಾಗಿ, ವೈರಾಗ್ಯವನ್ನು ತಾಳಿ, ಇಡೀ ಮಾನವ ಸಂಕುಲಕ್ಕೆ ಬದುಕಿನ ನಶ್ವರತೆಯನ್ನು ತಿಳಿಸುತ್ತಾ ವಾಸ್ತವಿಕತೆಯ ಬೆಳಕನ್ನು ಪರಿಚಯಿಸಿದ್ದಾರೆ. ಮಹಾಯೋಗಿ ವೇಮನರ ತತ್ವ-ಸಿದ್ಧಾಂತಗಳು ಇಡೀ ಮಾನವ ಕಲ್ಯಾಣಕ್ಕೆ ಪೂರಕವಾದವುಗಳು. ಮಹಾಯೋಗಿ ವೇಮನರ ಕಾವ್ಯ ಸೃಷ್ಟಿಯಲ್ಲಿ ಅಲೌಕಿಕ ಮಾರ್ಗದ ಸಾರ್ಥಕ ಹಾದಿಯನ್ನು ತೋರುತ್ತ ಶರಣರ ತತ್ವ ಚಿಂತನೆ ಪರಂಪರೆಯನ್ನು ನಾವೆಲ್ಲ ಕಾಣಬಹುದಾಗಿದೆ. ನಿರುಪಯೋಗಿಯಾಗಿದ್ದ ವೇಮನರಯ ಮಹಾ ಯೋಗಿ ಆದ ಕಥೆಯನ್ನು ಅರ್ಥಪೂರ್ಣವಾಗಿ ತಿಳಿಸಿದ ಅವರು ದುಶ್ಚಟಗಳ ದಾಸರಾಗಿದ್ದ ವೇಮನರನ್ನು ಅತ್ತಿಗೆಯಾದ ಹೇಮರೆಡ್ಡಿ ಮಲ್ಲಮ್ಮ ಮೈದುನನ ಮನ ತಿದ್ದುವಲ್ಲಿ ಪ್ರಯತ್ನಿಸಿ ಸಫಲಳಾದ ಕುರಿತು ವಿವರಿಸಿದರು.

    ಬಸವಯ್ಯ ಶಾಸ್ತ್ರೀಗಳು ಸಾನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರುಗಳಾದ ರವಿ ಮೂಲಿಮನಿ, ಪ್ರೇಮಾ ಮೇಟಿ, ಶೇಖಣ್ಣ ಗದ್ದಿಕೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ ಸೇರಿದಂತೆ ಸಮಾಜದ ಗಣ್ಯರು, ಮುಖಂಡರುಗಳು ಉಪಸ್ಥಿತರಿದ್ದರು. ಸುಧಾ ಹುಚ್ಚಣ್ಣವರ ಕಾರ್ಯಕ್ರಮವನ್ನು ನಿರೂಪಿಸಿದರು. ಪಂ. ವೆಂಕಟೇಶ ಅಲ್ಕೋಡ್ ಮತ್ತು ತಂಡದವರು ವಚನ ಗಾಯನ ಹಾಗೂ ನಾಡಗೀತೆ ಪ್ರಸ್ತುತಿಸಿದರು. 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts