ವೇಮನ ಜಯಂತಿ ಆಚರಣೆಯಲ್ಲಿ ಲೋಪ

blank

ರಾಮದುರ್ಗ: ಮಹಾಯೋಗಿ ವೇಮನ ಜಯಂತಿ ಆಚರಣೆ ಮಾಡುವಲ್ಲಿ ತಾಲೂಕಾಡಳಿತ ನಿರ್ಲಕ್ಷ್ಯ ಧೋರಣೆ ತಾಳಿದೆ ಎಂದು ಆರೋಪಿಸಿ ತಾಲೂಕು ರಡ್ಡಿ ಸಮುದಾಯದ ನೇತತ್ವದಲ್ಲಿ ಮುಖಂಡರು ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.

ಸರ್ಕಾರಿ ಕಚೇರಿಗಳಲ್ಲಿ ಮಹಾಯೋಗಿ ವೇಮನ ಜಯಂತಿ ಆಚರಿಸುವಂತೆ ಸರ್ಕಾರದ ಆದೇಶವಿದ್ದರೂ ಪಾಲನೆಯಾಗಿಲ್ಲ. ತಹಸೀಲ್ದಾರ್ ಅನುಪಸ್ಥಿತಿಯಲ್ಲಿ ಜಯಂತಿ ಆಚರಿಸಲಾಗಿದೆ. ಕಾಟಾಚಾರಕ್ಕೆ ಜಯಂತಿ ಆಚರಿಸುವ ಮೂಲಕ ವೇಮನರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾಧಿಕಾರಿಗಳೊಂದಿಗೆ ಸಮುದಾಯದ ಮುಖಂಡರು ಮಾತನಾಡಿ, ಇಲ್ಲಿನ ಅವ್ಯವಸ್ಥೆ ಕುರಿತು ಗಮನಕ್ಕೆ ತಂದಾಗ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ನಂತರ ಕಚೇರಿಯಿಂದ ತೆರಳಿದ ಮುಖಂಡರು, ತಾಲೂಕಿನ ವಿವಿಧ ಇಲಾಖೆಗಳಿಗೆ ಭೇಟಿ ನೀಡಿದಾಗ ಜಯಂತಿ ಆಚರಿಸದಿರುವ ಸಂಗತಿ ತಿಳಿದು ಬಂದಿತು. ಕೂಡಲೇ ಸರ್ಕಾರ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮವಹಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ರಡ್ಡಿ ಸಮುದಾಯದ ಅಧ್ಯಕ್ಷ ಜೆ.ಬಿ. ಮೇಲಪ್ಪಗೋಳ, ಮುಖಂಡರಾದ ಡಾ.ಕೆ.ವಿ. ಪಾಟೀಲ, ರವಿ ಗಲಬಿ. ವೆಂಕಣ್ಣ ಮುಧೋಳ, ಗೋಪಾಲರಡ್ಡಿ ಸಂಶಿ, ಪ್ರಕಾಶ ಚವಲಿ, ಪ್ರವೀಣ ನಂದೆಪ್ಪನವರ, ಪಡಿಯನಗೌಡ ಪಾಟೀಲ, ಸುನೀತಾ ತಿಮ್ಮನಗೌಡ್ರ, ಕಷ್ಣಗೌಡ ಪಾಟೀಲ, ಬಾಬುರಡ್ಡಿ ಹೆಬ್ಬಳ್ಳಿ, ಎಸ್.ಜಿ. ಬಿರಾದಾರ ಪಾಟೀಲ, ಶ್ರೀನಿವಾಸ ದ್ಯಾವಣ್ಣವರ, ಈರನಗೌಡ ಪಾಟೀಲ, ಹನುಮಂತ ಹಂಚಿನಾಳ ಇತರರಿದ್ದರು.

Share This Article

ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon

watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು  ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…

ಕುತ್ತಿಗೆ-ತಲೆ ನೋವನ್ನು ನಿರ್ಲಕ್ಷಿಸುತ್ತಿದ್ದೀರಾ?; ಎಚ್ಚರದಿಂದಿರಿ.. ಇದು ಅಪಾಯದ ಮುನ್ಸೂಚನೆ | Health Tips

ಕುತ್ತಿಗೆ ಮತ್ತು ಭುಜದ ಸುತ್ತಲಿನ ಪ್ರದೇಶದಲ್ಲಿನ ನೋವನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ. ಏಕೆಂದರೆ ಇದು ಸರ್ವಿಕಲ್…

ಅಳದಿದ್ದರು ಕಣ್ಣೀರು ಬರುತ್ತಿದೆಯೇ; ತಜ್ಞರು ಸೂಚಿಸಿರುವ ಸಿಂಪಲ್ ಪರಿಹಾರ ಹೀಗಿದೆ.. Health Tips

ಸೌಂದರ್ಯವನ್ನು ಅಳೆಯಲು ಕಣ್ಣುಗಳು ಒಂದು ಪ್ರಮುಖ ಮಾನದಂಡವಾಗಿದೆ. ಇದು ಪ್ರಮುಖ ಇಂದ್ರಿಯಗಳಲ್ಲಿ ಒಂದಾಗಿದೆ. ಅದಿಲ್ಲದೆ ಜೀವನವನ್ನು…