More

    ‘ಕೇಂದ್ರ ಸರ್ಕಾರಕ್ಕೆ ಟಾರ್ಗೆಟ್​ ಚೀನಾ ಅಲ್ಲ…ಏನಿದ್ದರೂ ಕಾಂಗ್ರೆಸ್​ ಮೇಲೆ ಕಣ್ಣು…’

    ನವದೆಹಲಿ: ಗಡಿಯಲ್ಲಿ ಭಾರತ-ಚೀನಾ ಸಂಘರ್ಷ ಉಲ್ಬಣವಾದಾಗಿನಿಂದ ಕಾಂಗ್ರೆಸ್​ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

    ಇದೀಗ ಮತ್ತೊಮ್ಮೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ದೂಷಿಸಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಗಡಿ ಬಿಕ್ಕಟ್ಟನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಅದು ಬಿಟ್ಟು ದೇಶದೊಳಗೆ ಕಾಂಗ್ರೆಸ್​ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದೆ.
    ಈ ಬಾರಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಕಾಂಗ್ರೆಸ್​ ಮುಖಂಡ ಮನೀಶ್​ ತಿವಾರಿ. ಟ್ವೀಟ್​ ಮಾಡಿರುವ ಅವರು, ಕೇಂದ್ರ ಸರ್ಕಾರ, ಗಡಿಯಲ್ಲಿ ಕ್ಯಾತೆ ತೆಗೆಯುತ್ತಿರುವ ಚೀನಾವನ್ನು ಟಾರ್ಗೆಟ್ ಮಾಡುವುದು ಬಿಟ್ಟು ಕಾಂಗ್ರೆಸ್​ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಅಹ್ಮದ್​ ಪಟೇಲ್​ ಅವರಿಗೆ ನಿರಂತರವಾಗಿ ಕಿರುಕುಳ ಮಾಡುತ್ತ, ಅವರ ಮೇಲೆ ದಬ್ಬಾಳಿಕೆ ಮಾಡುತ್ತಿದೆ ಎಂದು ಹೇಳಿದ್ದಾರೆ.

    ಕಾಂಗ್ರೆಸ್​ ಮುಖಂಡ ಅಹ್ಮದ್ ಪಟೇಲ್​ ಅವರನ್ನು ಇ.ಡಿ. ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೇ ಮನೀಶ್​ ತಿವಾರಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.  ಇತ್ತೀಚೆಗಷ್ಟೇ ರಾಹುಲ್​ ಗಾಂಧಿಯವರೂ ಕೂಡ ಕೇಂದ್ರ ಸರ್ಕಾರದ ವಿರುದ್ಧ ದ್ವೇಷ ರಾಜಕಾರಣದ ಆರೋಪ ಹೊರೆಸಿದ್ದರು.

    ಶ್ರೀದೇವಿ ಪೋಸ್ಟ್​ ಮಾರ್ಟಮ್​ ರಿಪೋರ್ಟ್​ ಬಿಡುಗಡೆ ಮಾಡಿದರಾ ಕಂಗನಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts