More

    ಬೈಂದೂರಿನಲ್ಲಿ ದಾಖಲೆಯ ಅಭಿವೃದ್ಧಿ ಕಾರ್ಯ

    ಶಿರೂರು: ಬೈಂದೂರು ಕ್ಷೇತ್ರದಲ್ಲಿ ಕಳೆದೆರಡು ವರ್ಷದಿಂದ ದಾಖಲೆಯ ಅಭಿವೃದ್ಧಿ ಕಾರ್ಯ ನಡೆದಿದೆ. ಶಿರೂರು ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದ್ದೇನೆ. ಸಂಕದಗುಂಡಿ ಹೊಳೆಗೆ ಕಿಂಡಿ ಅಣೆಕಟ್ಟು ನಿರ್ಮಾಣವಾದಲ್ಲಿ ಅಂತರ್ಜಲ ವೃದ್ಧಿಯಾಗಿ ನೀರಿನ ಸಮಸ್ಯೆ ಶಾಶ್ವತ ಪರಿಹಾರವಾಗುತ್ತದೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.

    ಶಿರೂರು ಗ್ರಾಪಂ ವ್ಯಾಪ್ತಿಯ ಕೋಟೆಮನೆ ಎಂಬಲ್ಲಿ 6.10 ಕೋಟಿ ರೂ. ರೂಪಾಯಿ ವೆಚ್ಚದ ಕಿಂಡಿ ಅಣೆಕಟ್ಟು ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. 505 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಮಂಜೂರಾಗಿದ್ದು ಮುಂದಿನ ಒಂದೂವರೆ ವರ್ಷದಲ್ಲಿ ಪ್ರತಿ ಮನೆ ಮನೆಗೂ ಕುಡಿಯುವ ನೀರಿನ ವ್ಯವಸ್ಥೆ ದೊರೆಯಲಿದೆ ಎಂದರು.

    ಜಿಪಂ ಸದಸ್ಯ ಸುರೇಶ್ ಬಟ್ವಾಡಿ, ತಾಪಂ ಸದಸ್ಯ ಮೌಲಾನ ದಸ್ತಗೀರ್, ಬಿಜೆಪಿ ಮಂಡಲದ ಅಧ್ಯಕ್ಷ ನೆಲ್ಯಾಡಿ ದೀಪಕ್ ಕುಮಾರ್ ಶೆಟ್ಟಿ, ಶಿರೂರು ಗ್ರಾಮ ಸಮಿತಿ ಅಧ್ಯಕ್ಷ ಶಂಕರ ಮೇಸ್ತ, ಕೇಶವ ಮೇಸ್ತ, ಶಿರೂರು ಚಾರೋಡಿ ಮೇಸ್ತ ಸಮಾಜದ ಅಧ್ಯಕ್ಷ ರಾಮಚಂದ್ರ ಬಿ. ಶಿರೂರಕರ್, ಗ್ರಾಮ ಪುರೋಹಿತ ಸುರೇಶ ಅವಭೃತ, ಇಂಜಿನಿಯರ್ ಪುನೀತ್ ಉಪಸ್ಥಿತರಿದ್ದರು. ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts