ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ವರ್ಗಾವಣೇ ದಂಧೆ ಕುರಿತು ನನ್ನ ಬಳಿ ಸಾಕ್ಷ್ಯಾಧಾರಗಳಿವೆ ಸ್ಪೀಕರ್ ಅನುಮತಿಸಿದರೆ ಅದನ್ನು ಸದನದಲ್ಲಿ ಪ್ಲೇ ಮಾಡುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಗುರುವಾರ ಸದನದಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕ ಜಗದೀಶ್ ಆತ್ಮಹತ್ಯೆ ವಿಚಾರವನ್ನು ಪ್ರಸ್ತಾಪಿಸಿದ ಎಚ್ಡಿಕೆ ಸ್ಪೀಕರ್ ಅನುಮತಿಸಿದರೆ ಸದನದಲ್ಲಿರುವ 224 ಶಾಸಕರಿಗೂ ಆಡಿಯೋವನ್ನು ಕೇಳಿಸಲು ಸಿದ್ದನಿದ್ದೇನೆ.
ಮಾತಿನ ಚಕಮಕಿ
ಈ ವೇಳೆ ಮಧ್ಯ ಪ್ರವೇಶಿಸಿದ ಇಂಧನ ಸಚಿವ ಕೆ.ಕೆ. ಜಾರ್ಜ್ ಕುಮಾರಸ್ವಾಮಿಯವರೇ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬೇಡಿ. ಇಂಧನ ಇಲಾಖೆಯಲ್ಲಿ ವರ್ಗಾವಣೆ ನಡೆಯುತ್ತಿದೆ ಎಂದು ಆರೋಪಿಸಿ ಪೆನ್ಡ್ರೈವ್ ತೋರಿಸಿದ್ದೀರಿ. ಈ ರೀತಿ ಹೇಳುವ ಬದಲು ಆ ಪೆನ್ಡ್ರೈವ್ಅನ್ನು ನಮಗೆ ಹಸ್ತಾಂತರಿಸಿ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ಥೇವೆ ಎಂದು ಹೇಳಿದ್ದರು.
ಇದನ್ನೂ ಓದಿ: ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ; ಮೂವರು ಮಕ್ಕಳು ಸೇರಿ ನಾಲ್ವರ ಮೃತ್ಯು
ಹಿಂದೆ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಎಲ್ಲರೂ ನನ್ನ ಮೇಲೆ ಆರೋಪ ಮಾಡಿದ್ದರು. ಸಿಐಡಿ, ಸಿಬಿಐ ತನಿಖೆ ಬಳಿಕ ಸತ್ಯಾಂಶ ಹೊರಬಂತು. ನಾನು ದೋಷಮುಕ್ತನಾದೆ. ಆ ಸಮಯದಲ್ಲಿ ಯಾರೂ ಸಹ ವಿಷಾದ ವ್ಯಕ್ತಪಡಿಸಲಿಲ್ಲ ಎಂದು ಕಿಡಿಕಾರಿದ್ದರು.
ಈ ವೇಳೆ ಜಾರ್ಜ್ ಹೇಳಿಕೆಗೆ ಪ್ರತಿಕ್ರಿಯಿಸಿದ ಎಚ್ಡಿಕೆ ನಾನು ನಿಮ್ಮ ಹೆಸರು ಎಲ್ಲಿಯೂ ಪ್ರಸ್ತಾಪಿಸಿಲ್ಲ. ನಿಮ್ಮ ಇಲಾಖೆಯಲ್ಲಿ ಯಾವ ಅಧಿಕಾರಿಗಳು ಮಾಡುತ್ತಾರೆ ಎಂಬುದು ನನಗೆ ಗೊತ್ತಿದೆ. ಸ್ಪೀಕರ್ ಅನುಮತಿಸಿದರೆ ಇಲ್ಲಿಯೇ ಎಲ್ಲರಿಗೂ ಕೇಳಿಸುತ್ತೇನೆ ಎಂದು ಹೇಳಿದ್ದರು. ಈ ವೇಳೆ ಇದೇ ವಿಚಾರಕ್ಕೆ ಕುಮಾರಸ್ವಾಮಿ ಹಾಗೂ ಸಚಿವ ಜಾರ್ಜ್ ನಡುವೆ ಮಾತಿನ ಚಕಮಕಿ ಏರ್ಪಟ್ಟಿತು.