ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಅವರ ಚಿಕಿತ್ಸೆ ನಡೆಯುತ್ತಿದೆ.
ಈ ಬಗ್ಗೆ ದಿಗ್ವಿಜಯ ನ್ಯೂಸ್ನೊಂದಿಗೆ ಮಾತನಾಡಿರುವ ಜಯದೇವ ಆಸ್ಪತ್ರೆಯ ಎಂಡಿ ಡಾ.ಮಂಜುನಾಥ್, “ದೊಡ್ಡಣ್ಣ ಅವರ ಹೃದಯಬಡಿತದಲ್ಲಿ ಏರುಪೇರಾಗುತ್ತಿತ್ತು. ಹೃದಯಬಡಿತ 70 ರಿಂದ 80ರ ಬದಲಾಗಿ 20-30ಕ್ಕೆ ಇಳಿದುಬಿಡುತ್ತಿತ್ತು. ಹೀಗಾಗಿ ಹೃದಯಕ್ಕೆ ಪೇಸ್ ಮೇಕರ್ ಅಳವಡಿಸಿದ್ದೇವೆ. ಅವರು ಚಿಕಿತ್ಸೆಗೆ ಸ್ಪಂದಿಸಿ, ಚೇತರಿಸಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.
ಮೂರು ದಿನ ದೊಡ್ಡಣ್ಣ ಅವರಿಗೆ ಚಿಕಿತ್ಸೆ ಮುಂದುವರೆಯಲಿದ್ದು, ಇದೇ ಭಾನುವಾರ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಮಹಾ ಸಿಎಂ ಉದ್ಧವ್ ಠಾಕ್ರೆ, ಪತ್ನಿ ರಶ್ಮಿ ಠಾಕ್ರೆ ವಿರುದ್ಧ ಬಿಜೆಪಿ ನಾಯಕರ ದೂರು
ತಾಲಿಬಾನ್ ಡೆಪ್ಯುಟಿ ಅಬ್ದುಲ್ ಘನಿ ಬರಾದರ್ ಅಫ್ಘಾನಿಸ್ತಾನದ ಹೊಸ ಅಧ್ಯಕ್ಷ?!