More

    ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಿರ್ದೇಶಕ ಭಗವಾನ್ ಚೇತರಿಕೆ …

    ಬೆಂಗಳೂರು: ಹಿರಿಯ ನಿರ್ದೇಶಕ ಮತ್ತು ನಟರಾಗಿಯೂ ಗುರುತಿಸಿಕೊಂಡಿದ್ದ ಭಗವಾನ್​ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿ, ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಹೇಳಲಾಗುತ್ತಿದೆ.

    ಇದನ್ನೂ ಓದಿ: ‘ಥಗ್ಸ್​​ ಆಫ್​ ರಾಮಘಡ’ ಚಿತ್ರಕ್ಕೆ ಉತ್ತರ ಕರ್ನಾಟಕದ ಆ ಘಟನೆಯೇ ಸ್ಫೂರ್ತಿ …

    ಕೆಲವು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಭಗವಾನ್ ಅವರನ್ನು ಶನಿವಾರ ಬೆಳಗ್ಗೆಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಐಸಿಯೂನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರದಿಂದ ಇಂದು ಬೆಳಗ್ಗಿನವರೆಗೆ ಅವರಿಗೆ ಆಕ್ಸಿಜನ್​ ಸಪೋರ್ಟ್​ನಲ್ಲಿದ್ದ ಅವರಿಗೆ ಇಂದು ಬೆಳಗ್ಗೆ ಆಕ್ಸಿಜನ್ ಸಪೋರ್ಟ್ ತೆಗೆಯಲಾಗಿದೆ.

    ಇದನ್ನೂ ಓದಿ: ನಾಗಶೇಖರ್​ ಈಗ ‘ಪಾದರಾಯ; ‘ವಿಕ್ರಾಂತ್​ ರೋಣ’ ನಿರ್ಮಾಪಕರ ಹೊಸ ಚಿತ್ರ

    ಭಗವಾನ್​ ಅವರು ಚಿಕಿತ್ಸೆಗೆ ಸ್ಪಂದಿಸಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಅವರನ್ನು ಮಂಗಳವಾರ ಬೆಳಿಗ್ಗೆ ವಾರ್ಡ್​ಗೆ ಶಿಫ್ಟ್​ ಮಾಡುವ ಸಾಧ್ಯತೆ ಇದೆ ಎಂದು ಅವರ ಮಗ ಹೇಳಿದ್ದಾರೆ.

    ‘ದಿ ಕಾಶ್ಮೀರ್​ ಫೈಲ್ಸ್​’ ಅಸಭ್ಯವಾಗಿತ್ತು ಎಂದ ಲ್ಯಾಪಿಡ್​ಗೆ ಜ್ಯೂರಿ ಸದಸ್ಯರ ಬೆಂಬಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts