More

    ಸಿಡಿಯಲ್ಲಿರುವ ಹುಡುಗಿಗೆ ಈಗಾಗಲೇ ರಕ್ಷಣೆ ಸಿಕ್ಕಿದೆ: ಯಾರಿಂದ ಎಂಬುದನ್ನು ಎಚ್​ಡಿಕೆ ಹೇಳಿದ್ರು ನೋಡಿ..

    ಮೈಸೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡಿರುವ ಸಿಡಿ ಪ್ರಕರಣದ ಕುರಿತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ

    ”ಸಿಡಿಯಲ್ಲಿ ಇದ್ದಾಳೆ ಎನ್ನಲಾದ ಆ ಹೆಣ್ಣು ಮಗಳಿಗೆ ಯಾರಿಂದ ರಕ್ಷಣೆ ಸಿಗಬೇಕಿದೆಯೋ, ಅವರಿಂದ ಸಿಕ್ಕಿದೆ. ಸರ್ಕಾರಕ್ಕೆ ಆ ಯುವತಿ ಟ್ರೇಸ್ ಆಗದೇ ಇದ್ದರೂ, ಆ ಯುವತಿಗೆ ಸಿಗಬೇಕಾದ ರಕ್ಷಣೆ ಕೆಲವರಿಂದ ಸಿಕ್ಕಿದೆ‌‌. ಸರ್ಕಾರದ ಒಳಗಿನವರೋ, ಸರ್ಕಾರದ ವಿರುದ್ದ ಇರುವವರೋ ಯಾರೋ ಆ ಯುವತಿಗೆ ಈಗಾಗಲೇ ರಕ್ಷಣೆ ಕೊಟ್ಟಿದ್ದಾರೆ” ಎಂದು ಹೇಳಿದ್ದಾರೆ.

    ಇದನ್ನೂ ಓದಿ: ರಮೇಶ ಜಾರಕಿಹೊಳಿ ಸಿಡಿ ಪ್ರಕರಣ: ನಿಡಗುಂದಿಯಲ್ಲಿ ಯುವತಿ ಅಜ್ಜನ ಮನೆಗೆ ನೋಟಿಸ್ !

    ”ಸರ್ಕಾರದ ಒಳಗೆ ಇದ್ದವರೇ ಆ ಯುವತಿಗೆ ರಕ್ಷಣೆ ಕೊಟ್ಟು ಇಟ್ಟುಕೊಂಡಿದ್ದಾರೋ ಗೊತ್ತಿಲ್ಲ. ಈ ಮನುಷ್ಯನ ಸ್ಪೀಡ್ ಗೆ (ರಮೇಶ್ ಜಾರಕಿಹೊಳಿ) ಬ್ರೇಕ್ ಹಾಕಲು ಸರ್ಕಾರದ ಒಳಗೆ ಇದ್ದವರೇ ಆ ಯುವತಿಗೆ ರಕ್ಷಣೆ ಕೊಡುತ್ತಿದ್ದಾರೋ ಗೊತ್ತಿಲ್ಲ. ಒಟ್ಟಿನಲ್ಲಿ ಆ ಯುವತಿಗೆ ಯಾರೋ ಕೆಲವರಿಂದ ರಕ್ಷಣೆಯಂತೂ ಇದ್ದೇ ಇದೆ” ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

    ”ಡಿ ಕೆ ಶಿವಕುಮಾರ್ ಹೆಸರನ್ನು ಈ ಪ್ರಕರಣದಲ್ಲಿ ಯಾರಾದರೂ ಹೇಳಿದ್ದಾರಾ ಎಂದು ಪ್ರಶ್ನಿಸಿದ ಎಚ್​ಡಿಕೆ, ಈ ರಾಜ್ಯದಲ್ಲಿ ಮಹಾ ನಾಯಕರು ಬಹಳ ಜನ ಇದ್ದಾರೆ. ಬಿಜೆಪಿ ಒಳಗೆ ಒಬ್ಬ ಮಹಾನಾಯಕರು ಬೆಳೆಯುತ್ತಿದ್ದಾರೆ. ಅಂತಹದರಲ್ಲಿ ಡಿ ಕೆ ಶಿವಕುಮಾರ್ ಏಕೆ ತಮ್ಮ ಹೆಸರನ್ನು ತಾವೇ ಈ ಪ್ರಕರಣದಲ್ಲಿ ಸಿಲುಕಿಸಿಕೊಂಡರೋ ಗೊತ್ತಿಲ್ಲ‌‌. ಅವರು ಪ್ರಬುದ್ಧ ರಾಜಕಾರಣಿ. ಅವರು ನನಗಿಂತಲೂ ಪ್ರಬುದ್ಧ ರಾಜಕಾರಣಿ. ಅವರು ದುಡುಕಿ ಏಕೆ ಈ ರೀತಿ ಅವರ ಹೆಸರನ್ನು ಅವರೇ ಪ್ರಕರಣದಲ್ಲಿ ಸಿಲುಕಿಸಿಕೊಳ್ಳುತ್ತಿದ್ದಾರೋ ಗೊತ್ತಿಲ್ಲ” ಎಂದು ಹೇಳಿದರು.

    ಸಿಡಿ ಪ್ರಕರಣ: ಶೀಘ್ರದಲ್ಲೇ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಯುವತಿಗೆ ನೋಟಿಸ್​ ಜಾರಿ

    ಅಶ್ಲೀಲ ಸಿಡಿ ಪ್ರಕರಣ: ‘ಸಂತ್ರಸ್ತ’ ಯುವತಿಯಿಂದಾಗಿ ಕಣ್ಣೀರಿಡುತ್ತಿರುವ ಪಿಜಿ ಮಾಲೀಕರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts