More

    ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

    ಶಿವಮೊಗ್ಗ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ನಾಲ್ಕರಲ್ಲಿ ಮೂರು ಕಡೆ ಬಿಜೆಪಿ ಬಹುಮತ ಪಡೆದ ಹಿನ್ನಲೆಯಲ್ಲಿ ಭಾನುವಾರ ಪಕ್ಷದ ಕಚೇರಿ ಎದುರು ನೂರಾರು ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

    ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಬೆಳಗ್ಗೆಯಿಂದ ಪಕ್ಷ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಂತೆ ಶಿವಮೊಗ್ಗದಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದರು. ಮಧ್ಯಾಹ್ನ ಸ್ಪಷ್ಟ ಬಹುಮತ ಸಾಧಿಸುತ್ತಿದ್ದಂತೆ ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
    ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಎಸ್.ಎನ್.ಚನ್ನಬಸಪ್ಪ, ಎಂಎಲ್‌ಸಿ ಡಿ.ಎಸ್.ಅರುಣ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪರ ಜಯಘೋಷ ಮೊಳಗಿಸಿದರು.
    ಮೂರು ರಾಜ್ಯದಲ್ಲಿ ಬಿಜೆಪಿ ಗೆದ್ದಿದ್ದು ಇದು ಮುಂದಿನ ದೇಶದ ರಾಜಕಾರಣದ ದಿಕ್ಸೂಚಿ ಆಗಲಿದೆ. 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ನೇತೃತ್ವದಲ್ಲಿ ಮತ್ತೊಮ್ಮೆ ಜಯಭೇರಿ ಗೆದ್ದು ನರೇಂದ್ರ ಮೋದಿ ಅವರೇ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಹರ್ಷೋದ್ಗಾರ ವ್ಯಕ್ತಪಡಿಸಿದರು. ಮುಖಂಡರು, ಕಾರ್ಯಕರ್ತರು ಮಾತ್ರವಲ್ಲದೇ ವಾಹನಗಳಲ್ಲಿ ಓಡಾಡುತ್ತಿದ್ದ ಸಾರ್ವಜನಿಕರಿಗೂ ಸಿಹಿ ವಿತರಿಸಿ ಸಂಭ್ರಮಿಸಿದರು.
    ಶಿವಮೊಗ್ಗ ವಿಭಾಗ ಪ್ರಭಾರ ಗಿರೀಶ್ ಪಟೇಲ್, ಪ್ರಮುಖರಾದ ಎಸ್.ಎಸ್.ಜ್ಯೋತಿಪ್ರಕಾಶ್, ಎಸ್.ದತ್ತಾತ್ರಿ, ಶಿವರಾಜ್, ಎಸ್.ಜ್ಞಾನೇಶ್ವರ್, ಇ.ವಿಶ್ವಾಸ್, ಎಚ್.ಮಾಲ್ತೇಶ್, ಸಂತೋಷ್ ಬಳ್ಳೆಕೆರೆ, ಹೃಷಿಕೇಶ್ ಪೈ, ರಾಹುಲ್ ಬಿದರಿ, ರತ್ನಾಕರ್, ಎನ್.ಕೆ.ಜಗದೀಶ್, ಲಕ್ಷ್ಮೀ ಶಂಕರನಾಯ್ಕ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts