More

    VIDEO: ಪ್ರವಾಹಕ್ಕೆ ಸಿಲುಕಿದ ವ್ಯಕ್ತಿಯನ್ನು ವಾಯುಪಡೆ ಹೆಲಿಕಾಫ್ಟರ್ ರಕ್ಷಿಸುತ್ತಿರುವ ರೋಚಕ ದೃಶ್ಯ

    ಬಿಲಾಸ್​ಪುರ: ಛತ್ತೀಸ್​ಗಢದಲ್ಲಿ ಬಿಲಾಸ್​ ಪುರ ಸಮೀಪ ಖುಟಾಘಾಟ್ ಅಣೆಕಟ್ಟು ವ್ಯಾಪ್ತಿಯಲ್ಲಿ ಪ್ರವಾಹದ ನಡುವೆ ಸಿಲುಕಿದ್ದ ವ್ಯಕ್ತಿಯನ್ನು ಭಾರತೀಯ ವಾಯುಪಡೆಯ ಹೆಲಿಕಾಫ್ಟರ್ ಮೂಲಕ ರಕ್ಷಿಸಿದ ರೋಚಕ ವಿಡಿಯೋ ಈಗ ವೈರಲ್ ಆಗಿದೆ.

    ತೀವ್ರ ಮಳೆಯ ಕಾರಣಕ್ಕೆ ಅಣೆಕಟ್ಟೆಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಹೆಚ್ಚಿನ ನೀರನ್ನು ಅಣೆಕಟ್ಟೆ ಗೇಟ್ ಓಪನ್ ಮಾಡಿ ಬಿಡಲಾಗಿದೆ. ಇದರಿಂದಾಗಿ ಅಣೆಕಟ್ಟೆಯ ಕೆಳಭಾಗದಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ವ್ಯಕ್ತಿಯೊಬ್ಬ ಅದರ ನಡುವೆ ಸಿಲುಕಿದ್ದ. ಮರವೊಂದನ್ನು ಆಶ್ರಯವಾಗಿ ಹಿಡಿದು ನೀರಿನ ಸೆಳೆತದ ನಡುವೆ ಬದುಕುವುದಕ್ಕೆ ಹೋರಾಟ ನಡೆಸುತ್ತಿದ್ದ.

    ಇದನ್ನೂ ಓದಿ: ವಿಶ್ವಗುರು: ಡಿಜೆ ಹಳ್ಳಿ ಗಲಭೆ, ಅನೇಕ ಪ್ರಶ್ನೆಗಳು!

    ಆತನನ್ನು ಭಾರತೀಯ ವಾಯುಪಡೆ ಹೆಲಿಕಾಫ್ಟರ್ ಮೂಲಕ ರಕ್ಷಿಸುವ ಕಾರ್ಯಾಚರಣೆಯನ್ನು ಬಿಲಾಸಪುರ ಪೊಲೀಸರು ಚಿತ್ರೀಕರಿಸಿದ್ದು ಸಾಮಾಜಿಕ ಜಾಲಾತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಕಾರ್ಯಾಚರಣೆ ಮೈನವಿರೇಳಿಸುವಂತೆ ಇದ್ದು, ಬಹಳ ಜನ ವಾಯುಪಡೆ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್)

    VIDEO|ಬಾಪ್ ಬಾಪ್ ಹೋತಾ ಹೇ, ಬೇಟಾ ಬೇಟಾ ಹೋತಾ ಹೇ: ಪಾಕಿಗಳ ಪ್ರತಿಭಟನೆಗೆ ಭಾರತೀಯನ ಪ್ರತಿರೋಧ ಹೀಗಿತ್ತು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts