More

    ಕುರ್ಚಿ ಮೇಲೆ ಸಿಎಂ, ನೆಲದ ಮೇಲೆ ಕುಳಿತ ದಲಿತ ಉಪ ಮುಖ್ಯಮಂತ್ರಿ: ತೆಲಂಗಾಣದ ನಲ್ಗೊಂಡ ದೇವಸ್ಥಾನದ ವಿಡಿಯೋ ವೈರಲ್

    ತೆಲಂಗಾಣ: ತೆಲಂಗಾಣ ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಅವರು ನೆಲದ ಮೇಲೆ ಕುಳಿತಿದ್ದಾರೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಇತರ ಸಚಿವರೊಂದಿಗೆ ಸ್ಟೂಲ್ ಮೇಲೆ ಕುಳಿತಿದ್ದರು. ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಫೇಸ್‌ಬುಕ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ಇದು ವಿಕ್ರಮಾರ್ಕ ಅವರಿಗೆ ಮಾಡಿದ ಅವಮಾನ ಎಂದು ಬಣ್ಣಿಸಿದೆ.

    ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಉಪ ಮುಖ್ಯಮಂತ್ರಿಗಳು ನಲ್ಗೊಂಡ ಜಿಲ್ಲೆಯ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದರು. ವಿಡಿಯೋದಲ್ಲಿ ಕೆಲವು ಸಚಿವರು ಸ್ಟೂಲ್ ಮೇಲೆ ಕುಳಿತಿದ್ದಾರೆ. ಎಲ್ಲರೂ ದೇವರ ಮುಖಾಮುಖಿಯಾಗಿ ಕುಳಿತಿದ್ದಾರೆ ಮತ್ತು ಅರ್ಚಕರು ಮಂತ್ರಗಳನ್ನು ಪಠಿಸುತ್ತಿದ್ದಾರೆ. ಆದರೆ, ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ನೆಲದ ಮೇಲೆಯೇ ಕುಳಿತಿದ್ದರು.

    ಯಾದಾದ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಅವರನ್ನು ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಅವರ ಸಚಿವರು ಕ್ರೂರವಾಗಿ ಅವಮಾನಿಸಿದ್ದಾರೆ ಎಂದು ಬಿಆರ್‌ಎಸ್ ಹೇಳಿದೆ. ರೇವಂತ್ ರೆಡ್ಡಿ, ಸಚಿವರಾದ ಕೋಮಟಿರೆಡ್ಡಿ ವೆಂಕಟ ರೆಡ್ಡಿ ಮತ್ತು ನಲಮಾಡ ಉತ್ತಮ್ ಕುಮಾರ್ ರೆಡ್ಡಿ ಜೊತೆ ಕುರ್ಚಿ ಮೇಲೆ ಕುಳಿತುಕೊಂಡಿದ್ದು ಭಟ್ಟಿ ವಿಕ್ರಮಾರ್ಕ ಅವರನ್ನು ನಿಂದಿಸಿದ್ದಾರೆ ಎಂದು ಬಿಆರ್​​ಎಸ್ ತಿಳಿಸಿದೆ.

    ಭಟ್ಟಿ ವಿಕ್ರಮಾರ್ಕ ಯಾರು?
    ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೆ.ಚಂದ್ರಶೇಖರ ರಾವ್ ನೇತೃತ್ವದ ಬಿಆರ್‌ಎಸ್ ಪಕ್ಷವನ್ನು ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿಸಿತು. ರೇವಂತ್ ರೆಡ್ಡಿಯನ್ನು ಸಿಎಂ ಮಾಡಿದಾಗ ಮಲ್ಲು ಭಟ್ಟಿ ವಿಕ್ರಮಾರ್ಕ ತೆಲಂಗಾಣದ ಮೊದಲ ದಲಿತ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

    ಮಧಿರಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ದ ಭಟ್ಟಿ ತೆಲಂಗಾಣದಲ್ಲಿ ಸಿಎಂ ಮುಖವಾಗಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು 1365 ಕಿ.ಮೀ ಉದ್ದದ ಪಾದಯಾತ್ರೆಗೆ ಜನತಾ ಯಾತ್ರೆ ಕೈಗೊಂಡಿದ್ದರು. ತೆಲಂಗಾಣದಲ್ಲಿ ಕಾಂಗ್ರೆಸ್ 119 ಸ್ಥಾನಗಳ ಪೈಕಿ 64 ಸ್ಥಾನಗಳನ್ನು ಗೆದ್ದಿತ್ತು. ಬಿಆರ್‌ಎಸ್‌ಗೆ 39 ಸ್ಥಾನಗಳು ಲಭಿಸಿವೆ.

    ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತ ಬಾಂಬರ್ ಯಾರೆಂಬುದು ಬಹುತೇಕ ಪತ್ತೆಯಾಗಿದೆ ಎಂದ ಗೃಹಸಚಿವ ಪರಮೇಶ್ವರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts