More

    ಟಿ.ಎ.ಶರವಣ ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾಗಿ ನೇಮಕ

    ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಟಿ.ಎ.ಶರವಣ ಅವರನ್ನು ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

    ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗು ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ನೇಮಕವನ್ನು ಮಾಡಲಾಗಿದೆ.. ಸಭೆಯ ನಂತರ ಟಿ. ಎ. ಶರವಣ ಅವರಿಗೆ ಕುಮಾರಸ್ವಾಮಿ ನೇಮಕದ ಆದೇಶ ಪ್ರತಿಯನ್ನು ನೀಡಿದರು.

    ಕಳೆದ ಎರಡು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಶರವಣ ಅವರು ಈ ಹಿಂದೆ ಪಕ್ಷದ ವಕ್ತರರಾಗಿ ಸೇವೆ ಸಲ್ಲಿಸಿದ್ದರು. ದೇವೇಗೌಡರ ಕುಟುಂಬದೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅವರು ಪಕ್ಷದ ನಿಲುವನ್ನು ಸಮರ್ಥಿಸಿಕೊಳ್ಳುವ ಮೂಲಕ ವರಿಷ್ಠರ ಮೆಚ್ಚುಗೆ ಸಂಪಾದಿಸಿದ್ದು, ಇದೀಗ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts