More

    ತ್ರಿಮೂರ್ತಿ ಸನ್ನಿಧಿಯಲ್ಲಿ ‘ವಿಧಿಬರಹ’ ಆರಂಭ

    ಬೆಂಗಳೂರು: ನಾಡಹಬ್ಬ ದಸರಾ ಮೊದಲ ದಿನ‌ ‘ವಿಧಿಬರಹ’ ಚಿತ್ರದ ಮುಹೂರ್ತ ಸಮಾರಂಭ ಕನಕಪುರ ರಸ್ತೆಯಲ್ಲಿರುವ ತ್ರಿಮೂರ್ತಿ ದೇವಸ್ಥಾನದಲ್ಲಿ ನೆರವೇರಿತು. ‌ಮೊದಲ‌ ಸನ್ನಿವೇಶಕ್ಕೆ ನಿರ್ಮಾಪಕ ಮಂಜುನಾಥ್. ಈ ಅರಂಭ ಫಲಕ ತೋರಿದರು.

    ಎಲ್ಲರ ಜೀವನದದಲ್ಲೂ ವಿಧಿ ಒಂದಲ್ಲ ಒಂದು ರೀತಿ ಆಟವಾಡುತ್ತದೆ ಎಂಬ ಕಥಾಹಂದರ ‘ವಿಧಿಬರಹ’ ಚಿತ್ರದಲ್ಲಿದೆ. ರಘುವರ್ಮ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಎರಡು ಚಿತ್ರಗಳ ನಿರ್ದೇಶಿಸಿ ಅನುಭವವಿರುವ ರಘುವರ್ಮ‌ ನಿರ್ದೇಶನದ ಮೂರನೇ ಚಿತ್ರವಿದು.

    ಇದನ್ನೂ ಓದಿ: ಬಿಡುಗಡೆಗೂ ಮುನ್ನ ವಸಿಷ್ಟ ‘ಕಾಲಚಕ್ರ’ ಚಿತ್ರದ ರಿಮೇಕ್​ ಹಕ್ಕು ಮಾರಾಟ

    ದೀಪ ಕ್ರಿಯೇಷನ್ಸ್ ಲಾಂಛನದಲ್ಲಿ ಮಂಜುನಾಥ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅಕ್ಟೋಬರ್ 30 ರಿಂದ ಬೆಂಗಳೂರು, ಶಿವಮೊಗ್ಗ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.‌

    ಆರು ಹಾಡುಗಳಿದ್ದು, ಲಯ ಕೋಕಿಲ ಸಂಗೀತ ನೀಡುತ್ತಿದ್ದಾರೆ. ಎಸ್.ಎಲ್.ವಿ‌ ರವಿ ಛಾಯಾಗ್ರಹಣ ಹಾಗೂ ಕೌರವ ವೆಂಕಟೇಶ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

    ಶೋಭ್ ರಾಜ್, ಲಯಕೋಕಿಲ, ರಾಜೇಶ್ ನಟರಂಗ, ಟೆನ್ನಿಸ್ ಕೃಷ್ಣ, ಮೋಹನ್ ಜುನೇಜ, ಪದ್ಮಜ, ರಾಜೇಶ್ ಗಟ್ಟಿಮೇಳ ಮುಂತಾದವರು ‘ವಿಧಿಬರಹ’ ಚಿತ್ರದ ತಾರಾಬಳಗದಲ್ಲಿದ್ದಾರೆ.

    ಗಾಯಗೊಂಡ ಲಕ್ಷ್ಮೀ ಫೋಟೋ ಹಾಕಿ ಅಸಮಾಧಾನ ಹೊರಹಾಕಿದ್ರು ನಟ ದರ್ಶನ್​ ಪತ್ನಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts