ಬೆಂಗಳೂರು: ನಾಡಹಬ್ಬ ದಸರಾ ಮೊದಲ ದಿನ ‘ವಿಧಿಬರಹ’ ಚಿತ್ರದ ಮುಹೂರ್ತ ಸಮಾರಂಭ ಕನಕಪುರ ರಸ್ತೆಯಲ್ಲಿರುವ ತ್ರಿಮೂರ್ತಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ನಿರ್ಮಾಪಕ ಮಂಜುನಾಥ್. ಈ ಅರಂಭ ಫಲಕ ತೋರಿದರು.
ಎಲ್ಲರ ಜೀವನದದಲ್ಲೂ ವಿಧಿ ಒಂದಲ್ಲ ಒಂದು ರೀತಿ ಆಟವಾಡುತ್ತದೆ ಎಂಬ ಕಥಾಹಂದರ ‘ವಿಧಿಬರಹ’ ಚಿತ್ರದಲ್ಲಿದೆ. ರಘುವರ್ಮ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಎರಡು ಚಿತ್ರಗಳ ನಿರ್ದೇಶಿಸಿ ಅನುಭವವಿರುವ ರಘುವರ್ಮ ನಿರ್ದೇಶನದ ಮೂರನೇ ಚಿತ್ರವಿದು.
ಇದನ್ನೂ ಓದಿ: ಬಿಡುಗಡೆಗೂ ಮುನ್ನ ವಸಿಷ್ಟ ‘ಕಾಲಚಕ್ರ’ ಚಿತ್ರದ ರಿಮೇಕ್ ಹಕ್ಕು ಮಾರಾಟ
ದೀಪ ಕ್ರಿಯೇಷನ್ಸ್ ಲಾಂಛನದಲ್ಲಿ ಮಂಜುನಾಥ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅಕ್ಟೋಬರ್ 30 ರಿಂದ ಬೆಂಗಳೂರು, ಶಿವಮೊಗ್ಗ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.
ಆರು ಹಾಡುಗಳಿದ್ದು, ಲಯ ಕೋಕಿಲ ಸಂಗೀತ ನೀಡುತ್ತಿದ್ದಾರೆ. ಎಸ್.ಎಲ್.ವಿ ರವಿ ಛಾಯಾಗ್ರಹಣ ಹಾಗೂ ಕೌರವ ವೆಂಕಟೇಶ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಶೋಭ್ ರಾಜ್, ಲಯಕೋಕಿಲ, ರಾಜೇಶ್ ನಟರಂಗ, ಟೆನ್ನಿಸ್ ಕೃಷ್ಣ, ಮೋಹನ್ ಜುನೇಜ, ಪದ್ಮಜ, ರಾಜೇಶ್ ಗಟ್ಟಿಮೇಳ ಮುಂತಾದವರು ‘ವಿಧಿಬರಹ’ ಚಿತ್ರದ ತಾರಾಬಳಗದಲ್ಲಿದ್ದಾರೆ.
ಗಾಯಗೊಂಡ ಲಕ್ಷ್ಮೀ ಫೋಟೋ ಹಾಕಿ ಅಸಮಾಧಾನ ಹೊರಹಾಕಿದ್ರು ನಟ ದರ್ಶನ್ ಪತ್ನಿ!