ಉಡುಪಿ: ಕಲೆ, ಕಲಾವಿದರ ಏಳಿಗೆಗೆ ಶ್ರಮಿಸುತ್ತಿರುವ ಯಕ್ಷಗಾನ ಕಲಾರಂಗ ಸಂಕಷ್ಟದಲ್ಲಿರುವವರಿಗೆ ಕಾಮಧೇನು, ಕಲ್ಪವೃಕ್ಷ$ವಾಗಿದೆ. ವಿದ್ಯಾಪೋಷಕ್ ಲಾನುಭವಿ ವಿದ್ಯಾರ್ಥಿಗಳು ದೈಹಿಕ, ಮಾನಸಿಕ, ಆಧ್ಯಾತ್ಮಿಕವಾಗಿ ಬೆಳೆಯುವುದರೊಂದಿಗೆ ಸಂಸ್ಥೆಯ ಋಣ ಸಂದಾಯಕ್ಕೆ ಮುಂದಾಗಬೇಕು ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳ್ ಹೇಳಿದರು.
ಬುಧವಾರ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್, ಟೆನಿಂಗ್ ಮತ್ತು ರಿಸರ್ಚ್ ಸೆಂಟರ್ನಲ್ಲಿ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಪ್ರಥಮ ಪಿ.ಯು.ಸಿ ಮುಗಿಸಿದ ವಿದ್ಯಾರ್ಥಿಗಳ ಐದು ದಿನಗಳ ಸನಿವಾಸ ಶಿಬಿರ ಉದ್ಘಾಟಿಸಿ, ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಮಾಹೆಯ ಸಹ ಕುಲಾಧಿಪತಿ ಡಾ. ನಾರಾಯಣ ಸಭಾಹಿತ್ ಮಾತನಾಡಿ, ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಮಾಹೆ ಸಂಪೂರ್ಣ ಉಚಿತವಾಗಿ ಅವಕಾಶ ಕಲ್ಪಿಸುತ್ತದೆ. ಕಲಾರಂಗದ ಕಾರ್ಯ ಚಟುವಟಿಕೆಗಳಿಗೆ ಮಾಹೆ ಸದಾ ಬೆಂಬಲ ನೀಡುತ್ತದೆ ಎಂದು ನುಡಿದರು. ಅಭ್ಯಾಗತರಾಗಿ ಪ್ರೊ. ಉಪೇಂದ್ರ ಸೋಮಯಾಜಿ, ಎಚ್. ನರಸಿಂಹ ಮೂರ್ತಿ, ಯು. ವಿಶ್ವನಾಥ ಶೆಣೈ, ಮರ್ಣೆ ಉಮೇಶ್ ಭಟ್, ಯು. ಎಸ್. ರಾಜಗೋಪಾಲ ಆಚಾರ್ಯ ಭಾಗವಹಿಸಿದ್ದರು. ಮೈಲೈಫ್ ಹುಬ್ಬಳ್ಳಿ ಸ್ಥಾಪಕ ಪ್ರವಿಣ್ ಗುಡಿ ಹಾಗೂ ಸಂಸ್ಥೆಯ ಉಪಾಧ್ಯಕ್ಷರಾದ ಎಸ್. ವಿ. ಭಟ್, ಪಿ. ಕಿಶನ್ ಹೆಗ್ಡೆ, ವಿ. ಜಿ. ಶೆಟ್ಟಿ, ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್ ಉಪಸ್ಥಿತರಿದ್ದರು. ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ನಿರೂಪಿಸಿ, ಅಶೋಕ್ ಎಂ. ವಂದಿಸಿದರು. ಮೇ 12ರ ತನಕ ನಡೆಯುವ ಈ ಐದು ದಿನದ ಶಿಬಿರದಲ್ಲಿ 220 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.