More

    ಜಾಗರಣೆ ಆಚರಿಸಿ ವಿಶೇಷ ಪೂಜೆ

    • ಕೆ.ಆರ್.ನಗರ : ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ಕೆ.ಆರ್.ನಗರ ತಾಲೂಕು ಮತ್ತು ಪಟ್ಟಣದ ವಿವಿಧ ದೇವಾಲಯಗಳಲ್ಲಿ ಜಾಗರಣೆ ಆಚರಿಸುವ ಮೂಲಕ ಭಕ್ತರು ವಿಶೇಷ ಪೂಜೆ ನೆರವೇರಿಸಿದರು.

    • ಪಟ್ಟಣದ ಡಾ.ರಾಜ್‌ಕುಮಾರ್ ಬಾನಂಗಳದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಶಾಖಾ ಕಚೇರಿ ವತಿಯಿಂದ ಬೃಹತ್ ಶಿವಲಿಂಗವನ್ನು ಸ್ಥಾಪಿಸಿ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ ಮತ್ತು ಚಿತ್ರ ಪ್ರದರ್ಶನ ಆಯೋಜಿಸಲಾಗಿದೆ. ಶಿವಲಿಂಗ ದರ್ಶನ ಮಾ.12 ರವರೆಗೆ ಇರಲಿದೆ.

    • ಪಟ್ಟಣದ ಹೊರ ವಲಯದಲ್ಲಿರುವ ಶ್ರೀ ಮೀನಾಕ್ಷಿ ಸಮೇತ ಶ್ರೀ ಅರ್ಕೇಶ್ವರಸ್ವಾಮಿ ದೇವಾಲಯದಲ್ಲಿ ಶುಕ್ರವಾರ ರಾತ್ರಿ ಪೂರ್ಣ ಜಾಗರಣೆ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಿತು. ಮುಂಜಾನೆ ಭಕ್ತರು ಕಾವೇರಿ ನದಿಯಲ್ಲಿ ಪುಣ್ಯಸ್ನಾನ ಮಾಡಿ ದೇವರ ದರ್ಶನ ಪಡೆದರು. ಸೂರ್ಯನ ರಶ್ಮಿ ದೇವಾಲಯದ ಗರ್ಭಗುಡಿಯಲ್ಲಿರುವ ಶಿವಲಿಂಗದ ಮೇಲೆ ಮೂಡುವುದನ್ನು ಕಣ್ತುಂಬಿಕೊಂಡರು.
    • ಪಟ್ಟಣದ ಮಲೆ ಮಹದೇಶ್ವರ ದೇವಾಲಯದಲ್ಲಿ ರಾತ್ರಿ ಇಡೀ ಧಾರ್ಮಿಕ ಕಾರ್ಯಕ್ರಮ ನೆರವೇರಿತು. ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

    09 ಕೆಆರ್‌ಎನ್-7,8:- ಕೆ.ಆರ್.ನಗರದ ಡಾ.ರಾಜ್‌ಕುಮಾರ್ ಬಾನಂಗಳದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಶಾಖಾ ಕಛೇರಿಯ ವತಿಯಿಂದ ಬೃಹತ್ 21 ಅಡಿ ಎತ್ತರದ ಪ್ರಕಾಶಮಯ ಶಿವಲಿಂಗವನ್ನು ಸ್ಥಾಪಿಸಿ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ.
    08 ಕೆಆರ್‌ಎನ್-9:- ಕೆ.ಆರ್.ನಗರದ ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದ ವಿನಿಯೋಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts