ವಿಜಯ್ ಹಜಾರೆ ಟ್ರೋಫಿ ನಾಕೌಟ್: ಕರ್ನಾಟಕ ತಂಡಕ್ಕೆ ಪಡಿಕ್ಕಲ್, ಪ್ರಸಿದ್ಧ ಕೃಷ್ಣ ಬಲ

ಬೆಂಗಳೂರು: ಆಸ್ಟ್ರೇಲಿಯಾ ಪ್ರವಾಸ ಮುಕ್ತಾಯಗೊಂಡ ಬೆನ್ನಲ್ಲೇ ಭಾರತ ಟೆಸ್ಟ್ ತಂಡದ ಎಡಗೈ ಬ್ಯಾಟರ್ ದೇವದತ್ ಪಡಿಕ್ಕಲ್ ಹಾಗೂ ವೇಗಿ ಪ್ರಸಿದ್ಧ ಕೃಷ್ಣ ಕರ್ನಾಟಕ ತಂಡಕ್ಕೆ ಮರಳಿದ್ದಾರೆ. ವಡೋದರದಲ್ಲಿ ಜನವರಿ 9ರಿಂದ ನಡೆಯಲಿರುವ ವಿಜಯ್ ಹಜಾರೆ ಟ್ರೋಫಿ ದೇಶೀಯ ಏಕದಿನ ಟೂರ್ನಿಯ ನಾಕೌಟ್ ಪಂದ್ಯಗಳಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಸೋಮವಾರ ಕರ್ನಾಟಕ ತಂಡವನ್ನು ಪ್ರಕಟಿಸಿದೆ. 16 ಆಟಗಾರರ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ.

ಪಡಿಕ್ಕಲ್, ಪ್ರಸಿದ್ಧ ಕೃಷ್ಣ ಆಗಮನ ರಾಜ್ಯ ತಂಡಕ್ಕೆ ಹೆಚ್ಚಿನ ಬಲ ತುಂಬಲಿದ್ದು, ಆಲ್ರೌಂಡರ್ ಯಶೋವರ್ಧನ್ ಪರಂತಪ್ ಇನ್ನೋರ್ವ ಹೊಸ ಸೇರ್ಪಡೆಯಾಗಿದ್ದಾರೆ. ಲೀಗ್ ಹಂತದ ಪಂದ್ಯದಲ್ಲಿ ಗಾಯದ ಸಮಸ್ಯೆಗೆ ತುತ್ತಾಗಿರುವ ವೇಗಿ ವೈಶಾಕ್ ವಿಜಯ್ ಕುಮಾರ್ ಜತೆಗೆ ಕಿಶನ್ ಎಸ್. ಬಿದರೆ ಮತ್ತು ಆಲ್ರೌಂಡರ್ ಮನೋಜ್ ಭಾಂಡಗೆ ಅವರನ್ನು ನಾಕೌಟ್ ಪಂದ್ಯಗಳಿಂದ ಕೈ ಬಿಡಲಾಗಿದೆ. ಕರ್ನಾಟಕ ತಂಡ ಶನಿವಾರ ಬರೋಡ ಎದುರು ಕ್ವಾರ್ಟರ್‌ೈನಲ್‌ನಲ್ಲಿ ಕಾದಾಟ ನಡೆಸಲಿದೆ.

ರಾಜ್ಯ ತಂಡ: ಮಯಾಂಕ್ ಅಗರ್ವಾಲ್ (ನಾಯಕ), ಶ್ರೇಯಸ್ ಗೋಪಾಲ್ (ಉಪನಾಯಕ), ನಿಕಿನ್ ಜೋಸ್, ದೇವದತ್ ಪಡಿಕ್ಕಲ್, ಅನೀಶ್ ಕೆವಿ, ಸ್ಮರಣ್ ಆರ್., ಶ್ರೀಜಿತ್ ಕೆಎಲ್ (ವಿ.ಕೀ), ಅಭಿನವ್ ಮನೋಹರ್, ಹಾರ್ದಿಕ್ ರಾಜ್, ಪ್ರಸಿದ್ಧ ಕೃಷ್ಣ, ಕೌಶಿಕ್ ವಿ., ವಿದ್ಯಾಧರ್ ಪಾಟೀಲ್, ಅಭಿಲಾಷ್ ಶೆಟ್ಟಿ, ಪ್ರವೀಣ್ ದುಬೆ, ಲವನೀತ್ ಸಿಸೋಡಿಯಾ (ವಿ.ಕೀ) ಹಾಗೂ ಯಶೋವರ್ಧನ್ ಪರಂತಪ್.

Share This Article

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…

ಬೇಸಿಗೆಯಲ್ಲಿ ಪಿತ್ತಕೋಶ ಸಮಸ್ಯೆ ಹೆಚ್ಚಳ

| ಪಂಕಜ ಕೆ.ಎಂ., ಬೆಂಗಳೂರು ಬಿಸಿಲ ಝುಳ ಹೆಚ್ಚಾಗಿದ್ದರೂ ದೇಹದಲ್ಲಿ ನೀರಿನಂಶ ಕಾಪಾಡಿಕೊಳ್ಳುವಲ್ಲಿ ವಿಫಲರಾಗುತ್ತಿರುವ ಜನರು…