More

    ಕಾಂಗ್ರೆಸ್‌ನಿಂದ ಪಾಕಿಸ್ತಾನದ ತತ್ವ ಸಿದ್ಧಾಂತ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ

    ಕುಷ್ಟಗಿ: ಪಾಕಿಸ್ತಾನದ ದಾವೂದ್ ಇಬ್ರಾಹಿಂ ತತ್ವ ಸಿದ್ಧಾಂತ ಅಳವಡಿಸಿಕೊಂಡು ಕಾಂಗ್ರೆಸ್ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದರು.


    ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಪಟ್ಟಣಕ್ಕೆ ಆಗಮಿಸಿದ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತಕ್ಕೆ ಪುಷ್ಪಾರ್ಪಣೆ ಮಾಡಿ ಮಾತನಾಡಿದರು. ದೇಶವನ್ನು ಪ್ರೀತಿಸುವವರೆಲ್ಲರೂ ನಮ್ಮವರೇ ಎಂದು ಭಾವಿಸುವುದನ್ನು ಮುಸ್ಲಿಂ ವಿರೋಧಿಗಳು ಎಂದು ಕಾಂಗ್ರೆಸ್‌ನವರು ಬಿಂಬಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯನ್ನು ದೇಶವೇ ಕೊಂಡಾಡುತ್ತಿದೆ. ಪಾಕಿಸ್ತಾನದ ಜನರೂ ಮೋದಿಯಂತಹ ವ್ಯಕ್ತಿಯ ನಾಯಕತ್ವ ಬಯಸುತ್ತಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನ ಬಿಜೆಪಿ ಬೆಂಬಲಿಸಿ ಕಾಂಗ್ರೆಸ್ ಪಕ್ಷವನ್ನು ಶಾಶ್ವತವಾಗಿ ಮೂಲೆಗುಂಪಾಗಿಸಲಿದ್ದಾರೆ ಎಂದರು.


    ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್, ಸಚಿವರಾದ ಆನಂದ ಸಿಂಗ್, ಹಾಲಪ್ಪ ಆಚಾರ್, ಸಂಸದ ಸಂಗಣ್ಣ ಕರಡಿ, ಮಾಜಿ ಶಾಸಕ ಕೆ.ಶರಣಪ್ಪ, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶರಣು ತಳ್ಳಿಕೇರಿ, ಪುರಸಭೆ ಅಧ್ಯಕ್ಷ ಜಿ.ಕೆ.ಹಿರೇಮಠ, ಜಿಪಂ ಮಾಜಿ ಸದಸ್ಯ ಕೆ.ಮಹೇಶ ಇತರರಿದ್ದರು. ಸಂಕಲ್ಪ ಯಾತ್ರೆ ಹಿನ್ನೆಲೆಯಲ್ಲಿ ನಡೆದ ರೋಡ್ ಶೋದಲ್ಲಿ ಮಹಿಳೆಯರು ಕುಂಭ ಹೊತ್ತು ಸಾಗಿದರೆ ಸಾವಿರಾರು ಜನ ಪಾಲ್ಗೊಂಡು ಬಿಜೆಪಿ ಪರ ಘೋಷಣೆ ಕೂಗಿದರು.


    ರಾಹುಲ್ ಗಾಂಧಿಗೆ ನಿಯತ್ತಿಲ್ಲ: ಸಿ.ಟಿ.ರವಿ

    ಕುಷ್ಟಗಿ: ಭಾರತದ ಸಾರ್ವಭೌಮತೆಗೆ ಧಕ್ಕೆ ತರುವ ಕೆಲಸವನ್ನು ರಾಹುಲ್ ಗಾಂಧಿ ಮಾಡುತ್ತಿದ್ದಾರೆ. ಅವರಿಗೆ ದೇಶಾಭಿಮಾನ ಇದ್ದಿದ್ದರೆ ವಿದೇಶದಲ್ಲಿ ಭಾರತವನ್ನು ಟೀಕಿಸುತ್ತಿದ್ದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಹುಲ್ ವಿರುದ್ಧ ಹರಿಹಾಯ್ದರು. ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿ, ಕಾಂಗ್ರೆಸ್‌ನಲ್ಲಿರುವ ಯಾರಿಗೂ ನಿಯತ್ತು ಇಲ್ಲದಂತಾಗಿದೆ. ಇನ್ನೂರು ವರ್ಷಗಳ ಕಾಲ ದೇಶವನ್ನು ಕೊಳ್ಳೆ ಹೊಡೆದವರಿಂದ ಸಹಾಯ ಕೇಳುತ್ತಿದ್ದಾರೆ. ವಿದೇಶಿಗರಿಂದ ಸಹಾಯ ಅಂಗಲಾಚಿಸುವ ದುರ್ಗತಿ ದೇಶಕ್ಕೆ ಬಂದಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದಾಗ ಶಾದಿಭಾಗ್ಯ ಯೋಜನೆ ಜಾರಿಗೆ ತಂದಿದ್ದಲ್ಲದೆ ವೀರಶೈವ ಲಿಂಗಾಯತ ಸಮುದಾಯ ಒಡೆಯುವ ತಂತ್ರಗಾರಿಕೆ ಮಾಡಿದರು. ಮಂಡ್ಯದಲ್ಲಿ ಮೋದಿ ಸ್ವಾಗತಕ್ಕೆ ಹಾಕಿದ್ದ ಉರಿಗೌಡ ನಂಜೇಗೌಡರ್ ದ್ವಾರ ತೆರವುಗೊಳಿಸಿದ್ದು ಯಾಕೆ ಅಂತ ಗೊತ್ತಾಗಲಿಲ್ಲ. ಉರಿಗೌಡ ನಂಜೇಗೌಡರ ಶಾಶ್ವತ ದ್ವಾರ ನಿರ್ಮಾಣ ಮಾಡುವುದಾಗಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts