More

    ಕುಡಿಯುವ ನೀರಿಗಾಗಿ ಪ್ರತಿಭಟನೆ

    ವಿಜಯಪುರ: ತಾಲೂಕಿನ ಆಹೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದ್ದು, ಈ ಬಗ್ಗೆ ಬಗೆಹರಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಗ್ರಾಪಂ ಕಾರ್ಯದರ್ಶಿ ಆರ್.ಬಿ.ಸಂಕನ್ನವರ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
    ಕಳೆದ ಒಂದು ತಿಂಗಳಿಂದ ಅಂಕಲಗಿ ಗ್ರಾಮದಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಗ್ರಾಮಸ್ಥರು ನಾಲ್ಕು ಕಿ.ಮೀ. ದೂರ ಹೋಗಿ ನೀರು ತರಬೇಕಾಗಿದೆ. ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಸಂಪೂರ್ಣ ಹಳ್ಳ ಹಿಡಿದಿದ್ದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಕೂಡ ಗ್ರಾಮಕ್ಕೆ ಆಗಮಿಸಿ, ಸಮಸ್ಯೆ ಆಲಿಸುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಅಧಿಕಾರಿಗಳು ನಿರ್ಲಕ್ಷ್ಯವಹಿಸದೆ ಸಮಸ್ಯೆಯನ್ನು ಶೀಘ್ರ ಬಗೆಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದರು. ಗ್ರಾಮಸ್ಥರಾದ ಭೀರಪ್ಪ ಇಂಡಿ, ರಾಜಕುಮಾರ ಮಾಶ್ಯಾಳ, ರಾಘವೇಂದ್ರ ಜಾಹಗೀರದಾರ, ರಘುವೀರ ಪೂಜಾರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts