More

    ಕಂಟೇನ್ಮೆಂಟ್ ವಲಯಗಳಲ್ಲಿ ಸಹಕರಿಸಿ

    ವಿಜಯಪುರ: ಜಿಲ್ಲೆಯ ಕಂಟೇನ್ಮೆಂಟ್ ವಲಯಗಳಲ್ಲಿ ಆರೋಗ್ಯ ಸಮೀಕ್ಷೆಗಾಗಿ ಆಗಮಿಸುವ ತಂಡಗಳಿಗೆ ಸಮರ್ಪಕ ಮತ್ತು ವಸ್ತುನಿಷ್ಠ ಮಾಹಿತಿ ನೀಡುವ ಮೂಲಕ ಸಹಕರಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಮನವಿ ಮಾಡಿದರು.
    ನಗರದ ಅಲ್ಲಾಪುರ ಬೇಸ್ ಹಾಗೂ ಪೈಲ್ವಾನ್‌ಗಲ್ಲಿ ಕಂಟೇನ್ಮೆಂಟ್ ವಲಯಗಳಿಗೆ ಗುರುವಾರ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದ ಅವರು, ಕೋವಿಡ್-19 ಅಪಾಯಕಾರಿ ಮತ್ತು ಸಾಂಕ್ರಾಮಿಕ ರೋಗವಾಗಿರುವ ಹಿನ್ನಲೆಯಲ್ಲಿ ಎಲ್ಲರೂ ಒಟ್ಟುಗೂಡಿ ಕಾರ್ಯ ನಿರ್ವಹಿಸುವ ಅಗತ್ಯವಿದೆ. ಈ ವಲಯಗಳಲ್ಲಿ ಪ್ರತಿ ಮನೆಗೆ ಆರೋಗ್ಯ ಸಮೀಕ್ಷೆಗಾಗಿ ಆರೋಗ್ಯ ಕಾರ್ಯಕರ್ತರು ಭೇಟಿ ನೀಡುತ್ತಿದ್ದು, ಅವರಿಗೆ ಸಹಕರಿಸುವಂತೆ ತಿಳಿಸಿದರು.
    ಯಾವುದೇ ರೀತಿಯ ತೀವ್ರ ಉಸಿರಾಟ ತೊಂದರೆ, ನೆಗಡಿ, ಕೆಮ್ಮು, ಜ್ವರದಂತಹ ಆರೋಗ್ಯ ಸಂಬಂಧಿಸಿದ ಲಕ್ಷಣಗಳನ್ನು ಹೊಂದಿದವರು ಯಾವುದೇ ಸಂದರ್ಭದಲ್ಲಿ ಕಂಟೇನ್ಮೆಂಟ್ ವಲಯದ ಖಾಸಗಿ ಆಸ್ಪತ್ರೆಯ ವೈದ್ಯರಲ್ಲಿ ಚಿಕಿತ್ಸೆ ಪಡೆಯುವಂತಿಲ್ಲ. ಈ ಕುರಿತು ತಕ್ಷಣ ಆರೋಗ್ಯ ಸಮೀಕ್ಷಾ ತಂಡಕ್ಕೆ ಅಥವಾ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡುವಂತೆ ಕಟ್ಟುನಿಟ್ಟಿನ ಸೂಚನೆಯನ್ನು ಅವರು ನೀಡಿದರು.
    ಈ ಕಂಟೇನ್ಮೆಂಟ್ ವಲಯಗಳಲ್ಲಿ ಅವಶ್ಯಕ ಆಹಾರ ಕಿಟ್‌ಗಳನ್ನು ಪೂರೈಸಲಾಗುವುದು. ಶೌಚಗೃಹ ನಿರ್ಮಾಣಕ್ಕೆ ಪಾಲಿಕೆ ಆಯುಕ್ತರಿಂದ ಸೂಕ್ತ ಕ್ರಮ ಆಗಲಿದೆ ಎಂದು ತಿಳಿಸಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಮಾತನಾಡಿ, ಕಂಟೇನ್ಮೆಂಟ್ ವಲಯಗಳಲ್ಲಿನ ಸಾರ್ವಜನಿಕರು ಯಾವುದೇ ಪರಿಸ್ಥಿತಿಯಲ್ಲಿ ಮನೆಗಳಿಂದ ಹೊರಗೆ ಬಂದು ತಿರುಗಾಡಬಾರದು. ಆರೋಗ್ಯ ಸಮೀಕ್ಷೆಗೆ ಬರುವ ತಂಡಗಳಿಗೆ ಅವಶ್ಯಕ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು. ಯಾವುದೇ ರೀತಿಯ ತಪ್ಪು ಮಾಹಿತಿ ನೀಡುವುದಾಗಲಿ, ಅಸಹಕಾರ ಕಂಡುಬಂದಲ್ಲಿ ತಕ್ಷಣ ಪ್ರಕರಣ ದಾಖಲಿಸುವುದಾಗಿ ಅವರು ತಿಳಿಸಿದರು.

    ಡಿವೈಎಸ್‌ಪಿ ಲಕ್ಷ್ಮಿನಾರಾಯಣ, ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ, ಡಾ.ಮುಕುಂದ ಗಲಗಲಿ, ಡಾ. ಕವಿತಾ, ಪಿಎಸ್‌ಐ ರಾಜೇಶ್ ಚವಾಣ್, ಮುಖಂಡರಾದ ಪಾಷಾ ಹಕಿಂ, ಪೀಟರ್ ಅಲೆಗ್ಸ್ಸಾಂಡರ್, ಡಾ.ಜೆನಂತ್, ಡಾ.ಗುಂಡಬಾವಡಿ, ಡಾ.ಬಾಲಕೃಷ್ಣ, ಡಾ. ಸಂತೋಷ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

    ಕಂಟೇನ್ಮೆಂಟ್ ವಲಯಗಳಲ್ಲಿ ಸಹಕರಿಸಿ
    ಕಂಟೇನ್ಮೆಂಟ್ ವಲಯಗಳಲ್ಲಿ ಸಹಕರಿಸಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts