More

    ತಪ್ಪಿತಸ್ಥರ ಮೇಲೆ ಕಾನೂನು ಕ್ರಮಕ್ಕೆ ಮನವಿ

    ವಿಜಯಪುರ: ನಗರ ಶಾಸಕ ಬಸನಗೌಡ ರಾಮನಗೌಡ ಪಾಟೀಲ (ಯತ್ನಾಳ) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಪೊಲೀಸ್ ವರಿಷ್ಠಾಧಿಕಾರಿಗೆ ಬಿಜೆಪಿ ಮುಖಂಡರು ಬುಧವಾರ ಮನವಿ ಸಲ್ಲಿಸಿದರು.

    ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರುದ್ರ ಬಾಗಲಕೋಟ ಹಾಗೂ ಉಮೇಶ ವಂದಾಲ ಮಾತನಾಡಿ, ಅಭಿವೃದ್ಧಿ ನೆಪದಲ್ಲಿ ಕೆಲವು ವ್ಯಕ್ತಿಗಳು ನಗರ ಶಾಸಕ ಬಸನಗೌಡ ರಾಮನಗೌಡ ಪಾಟೀಲ (ಯತ್ನಾಳ) ವಿರುದ್ಧ ಅವಹೇನಕಾರಿಯಾಗಿ ಮಾತನಾಡಿದ್ದು ಖಂಡನೀಯ ಎಂದರು.

    ಶಾಸಕರು ಸಾಕಷ್ಟು ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಕರೊನಾ ಮಹಾಮಾರಿ ಸಂದರ್ಭದಲ್ಲಿ ಹಲವಾರು ಜನೋಪಕಾರಿ ಕೆಲಸಗಳನ್ನು ಮಾಡಿದ್ದಾರೆ. ಇಂತಹ ಶಾಸಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದು ತಪ್ಪು. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
    ಪಾಲಿಕೆ ಮಾಜಿ ಸದಸ್ಯರಾದ ರಾಜಶೇಖರ ಮಗಿಮಠ, ಪ್ರೇಮಾನಂದ ಬಿರಾದಾರ, ಗೂಳಪ್ಪ ಶೆಟಗಾರ, ಎಂ.ಎಸ್.ಕರಡಿ, ಅಶೋಕ ಬೆಲ್ಲದ, ಮುಖಂಡರಾದ ಬಾಗಪ್ಪ ಕನ್ನೊಳ್ಳಿ, ಸಂತೋಷ್ ಚವಾಣ್, ಶರಣು ಸಬರದ, ಬಸವರಾಜ ಬೈಚಬಾಳ, ಗುರು ಗಚ್ಚಿನಮಠ, ಕೃಷ್ಣ ಗುನ್ನಾಳಕರ, ರಾಜಕುಮಾರ ಸಗಾಯಿ, ಕಿರಣ್ ಅಣೆಪ್ಪನವರ, ಪ್ರವೀಣ ಕೂಡಗಿ, ಪಾಂಡು ಸಾಹುಕಾರ ದೊಡಮನಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts