More

    ಹದಗೆಟ್ಟ ರಸ್ತೆಗಳ ದುರಸ್ತಿಗೆ ಒತ್ತಾಯ

    ವಿಜಯಪುರ : ನಗರದಲ್ಲಿ ಹದಗೆಟ್ಟ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಜಿಲ್ಲಾ ಸದ್ಭಾವನಾ ಮಂಚ್ ವತಿಯಿಂದ ಶುಕ್ರವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

    ಸದ್ಭಾವನಾ ಮಂಚ್ ಸಹ ಸಂಚಾಲಕ ವಿ.ಎಸ್. ಖಾಡೆ ಮಾತನಾಡಿ, ನಗರದಲ್ಲಿ ಕಳೆದ ಮೂರು ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಜನರಿಗೆ ಮೂಲ ಸೌಕರ್ಯ ಒದಗಿಸುವ ಕೆಲಸ ಮಾಡಬೇಕೆಂದು ಒತ್ತಾಯಿಸಿದರು.

    ನ್ಯಾಯವಾದಿ ಕೆ.ಎಫ್. ಅಂಕಲಗಿ ಮಾತನಾಡಿ, ವಿಜಯಪುರ ನಗರದಲ್ಲಿ ಸೌಲಭ್ಯಗಳ ಕೊರತೆಯಿಂದಾಗಿ ಜನರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದರು.

    ಕಾಂಗ್ರೆಸ್ ಮುಖಂಡೆ ವಿದ್ಯಾವತಿ ಅಂಕಲಗಿ ಮಾತನಾಡಿ, ನಗರದಲ್ಲಿ ಹದೆಗೆಟ್ಟಿರುವ ರಸ್ತೆಗಳ ದುರಸ್ತಿಯನ್ನು ಮಾಡುವ ಮೂಲಕ ಜನರನ್ನು ಅಸ್ತಮಾ ರೋಗದಿಂದ ಕಾಪಾಡಬೇಕು ಎಂದರು. ಜಮಾತೆ ಇಸ್ಲಾಮಿ ಹಿಂದ್ ಸಂಘಟನೆ ಮುಖಂಡ ಮಹಮ್ಮದ ಯುಸೂಫ್ ಖಾಜಿ, ನಜೀರ ಅಹಮದ ಖಾಜಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts