More

    ಮಹಾನಗರಿಗೂ ಒಕ್ಕರಿಸಿದ ಮಹಾಮಾರಿ

    ವಿಜಯಪುರ: ರಾಜ್ಯಕ್ಕೆ ಮಾದರಿಯಾಗಿದ್ದ ಮಹಾನಗರದಲ್ಲೂ ಮಹಾಮಾರಿ ಕಾಣಿಸಿಕೊಂಡಿದ್ದು, ಪರೀಕ್ಷೆಗೆ ಕಳುಹಿಸಲಾದ ಒಟ್ಟು 81 ಪ್ರಕರಣಗಳ ಪೈಕಿ 80 ನೆಗೆಟಿವ್ ಎಂದಾಗಿದ್ದು 1 ಪಾಸಿಟಿವ್ ಬಂದಿದೆ.

    ಹೀಗಾಗಿ ನಗರದ ವಿವಿಧ ಭಾಗಗಳಲ್ಲಿ ಸೀಲ್‌ಡೌನ್ ಮಾಡಲಾಗಿದ್ದು ಜಿಲ್ಲಾದ್ಯಂತ ಲಾಕ್‌ಡೌನ್ ಮತ್ತಷ್ಟು ಬಿಗಿಗೊಳಿಸಲಾಗಿದೆ. ನಗರದ ಹಕೀಂ ಚೌಕ್, ಕಾಮತ್ ಹೋಟೆಲ್ ಮುಂಭಾಗದ ಹರಣಶಿಖಾರಿ ಓಣಿ, ಕೊಂಚಿಕೊರವರ ಓಣಿ, ಬಡಿ ಕಮಾನ, ಚಪ್ಪರ್ ಬಂದ್ ಓಣಿ, ಜಾಮಿಯಾ ಮಸೀದಿ ಹಿಂದೆ ಇರುವ ಕೆಎಚ್‌ಬಿ ಕಾಲನಿ, ಪೈಲ್ವಾನ್ ನಗರ, ಮಹಿಬೂಬ ನಗರ, ಬೆಂಡಿಗೇರಿ ಓಣಿ, ಸುಭಾಸ್ ಕಾಲನಿ, ಶಾಂತಿ ನಗರ ಈ ಭೌಗೋಳಿಕ ಪ್ರದೇಶವನ್ನು ನಿಷೇಧಿತ ಪ್ರದೇಶ ಮತ್ತು ಕಂಟೋನ್ಮೆಂಟ್ ರೆನ್ ಎಂದು ಘೋಷಿಸಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಆದೇಶಿಸಿದ್ದಾರೆ.

    ಈ ರೆನ್ ಹೊರಗಿನ ಸುತ್ತಮುತ್ತಲಿನ 100 ಮೀ. ಪ್ರದೇಶದ ವ್ಯಾಪ್ತಿಯ ಭೌಗೋಳಿಕ ಪ್ರದೇಶವನ್ನು ಬರ್ ರೆನ್ ಎಂದು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಈ ಪ್ರದೇಶದ ವ್ಯಾಪ್ತಿಯಲ್ಲಿ ಯಾವುದೇ ವ್ಯಕ್ತಿ ಜನರ ಕಾಲ್ನಡಿಗೆ, ವಾಹನದ ಮೂಲಕ ಅಥವಾ ಇನ್ನಾವುದೇ ರೀತಿಯಿಂದ ಈ ಪ್ರದೇಶದಲ್ಲಿ ಆಗಮನ ಮತ್ತು ನಿರ್ಗಮನವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಈ ಆದೇಶ ಕರ್ತವ್ಯನಿರತ ವಾಹನಗಳಿಗೆ ಅನ್ವಯಿಸುವುದಿಲ್ಲ, ನಿರ್ಬಂಧಿತ ಪ್ರದೇಶಕ್ಕೆ ಒಂದೇ ಆಗಮನ-ನಿರ್ಗಮನ ಇರಬೇಕು. ಯಾವುದೇ ವಾಹನವು ಈ ನಿರ್ಬಂಧಿತ ಪ್ರದೇಶದಿಂದ ನಿರ್ಗಮಿಸುವ ಪೂರ್ವದಲ್ಲಿ ಕಡ್ಡಾಯವಾಗಿ ಸ್ಯಾನಿಟೈಜೇಶನ್ ಮಾಡಿ ನಿರ್ಗಮಿಸಬೇಕು. ಈ ಪ್ರದೇಶದ ಶುಚಿತ್ವವನ್ನು ಮಹಾನಗರ ಪಾಲಿಕೆಯಿಂದ ಕಾಪಾಡಬೇಕು.

    ನಿಷೇಧಿತ ಪ್ರದೇಶದ ವ್ಯಾಪ್ತಿಯಲ್ಲಿರುವ ಎಲ್ಲ ನಿವಾಸಿಗಳು ಮುಂದಿನ ಆದೇಶದ ವರೆಗೆ ತಮ್ಮ ಮನೆಯಲ್ಲಿದ್ದುಕೊಂಡು ಆರೋಗ್ಯ ಇಲಾಖೆ ಅಧಿಕಾರಿಗಳು ನೀಡುವ ಸಲಹೆ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ತಂಡಗಳನ್ನು ರಚಿಸಿ ನಿತ್ಯ ಈ ಪ್ರದೇಶದಲ್ಲಿ ವಾಸಿಸುತ್ತಿರುವವರ ಆರೋಗ್ಯ ತಪಾಸಣೆ ಕೈಗೊಂಡು ತೀವ್ರ ನಿಗಾ ವಹಿಸಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮ ಕೈಗೊಳ್ಳುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ಐಇಸಿ, ಬಿಬಿಸಿ ಚಟುವಟಿಕೆ ಕೈಗೊಳ್ಳಬೇಕು. ಕಂಟೊನ್ಮೆಂಟ್ ಮತ್ತು ಬರ್ ರೆನ್‌ಗಳಲ್ಲಿ ಪೊಲೀಸ್ ಬಂದೋಬಸ್ತ್ ಮತ್ತು ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಬೇಕು ಎಂದು ಅವರು ಆದೇಶ ನೀಡಿದ್ದಾರೆ.

    ಅದರಂತೆ ನಾಲ್ಕಕ್ಕಿಂತ ಹೆಚ್ಚಿನ ಜನರು ಈ ಪ್ರದೇಶ ವ್ಯಾಪ್ತಿಯಲ್ಲಿ ಗುಂಪು ಸೇರುವುದು, ಜನಸಂದಣಿಯಾಗುವ ಮೆರವಣಿಗೆ, ಸಭೆ, ಧಾರ್ಮಿಕ ಉತ್ಸವ, ಮದುವೆ, ಕ್ರೀಡೆ, ಉರುಸು, ಸಂತೆ, ಜಾತ್ರೆ, ಸಮ್ಮೇಳನ ಸಂಪೂರ್ಣ ನಿಷೇಧಿಸಲಾಗಿದೆ. ಎಲ್ಲ ಮನೆಗಳಲ್ಲಿನ ಸದಸ್ಯರು ಅವರ ಮನೆಬಿಟ್ಟು ಹೊರಗಡೆ ತಿರುಗಾಡುವಂತಿಲ್ಲ. ಇತರರ ಮನೆಗಳಿಗೆ ಹೋಗುವಂತಿಲ್ಲ. ಈ ಪ್ರದೇಶಗಳಲ್ಲಿನ ಎಲ್ಲ ಮನೆಗಳ ಸದಸ್ಯರು ಗೃಹಬಂಧನದಲ್ಲಿರಬೇಕು. ಆದೇಶ ಉಲ್ಲಂಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ-188 ರನ್ವಯ ಕ್ರಮ ಜರುಗಿಸಲಾಗುತ್ತದೆ. ಈ ಆದೇಶ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ಕಾರ್ಯಗತಗೊಳಿಸಲು ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಪೊಲೀಸ್ ಉಪವಿಭಾಗ ಅಧೀಕ್ಷಕರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

    ಅಗತ್ಯ ವಸ್ತುಗಳ ಪೂರೈಕೆಗೆ ಕ್ರಮ
    ಸರ್ಕಾರದ ಆದೇಶದನ್ವಯ ಮತ್ತು ಕಂಟೊನ್ಮೆಂಟ್ ಪ್ಲಾೃನ್ ಅನ್ವಯ ನಗರದ ಭೌಗೋಳಿಕ ಪ್ರದೇಶವನ್ನು ನಿಷೇಧಿತ ಪ್ರದೇಶ ಮತ್ತು ಕಂಟೊನ್ಮೆಂಟ್ ರೆನ್ ಹಾಗೂ ಬಫರ್ ಜೋನ್ ಎಂದು ಗುರುತಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆ ಮತ್ತು ಆ ಪ್ರದೇಶದ ಶುಚಿತ್ವವನ್ನು ಕಾಯ್ದುಕೊಳ್ಳಲು ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ ( ಮೊ.9886745505) ನೇತೃತ್ವದಲ್ಲಿ ತಂಡ ರಚಿಸಲಾಗಿದೆ.

    ತಂಡದಲ್ಲಿ ಪಾಲಿಕೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್.ಎಸ್. ಸುರ್ಕಿ (ಮೊ. 88675 62516), ಇನ್ನೋರ್ವ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆರ್.ಎಂ. ಹುಂಡೇಕಾರ (ಮೊ. 9845768889) ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದು, ಸಾರ್ವಜನಿಕರ ಅಗತ್ಯ ವಸ್ತುಗಳ ಪೂರೈಕೆಯ ಬೇಡಿಕೆ ಪಡೆಯಲು ಸಹಾಯವಾಣಿ ಕೇಂದ್ರವನ್ನು ಸಹ ಆರಂಭಿಸಲಾಗಿದೆ. ಶ್ರೀಮತಿ ಮುಜಾವರ (ಮೊ.8310425195), ಪ್ರೀತಿ ಇವನಿ (ಮೊ.8197804052), ಪಲ್ಲವಿ (ಮೊ.6363585604) ಅವರನ್ನು ಅವಶ್ಯಕ ವಸ್ತುಗಳಿಗೆ ಸಂಪರ್ಕಿಸಬಹುದಾಗಿದೆ. ಅದರಂತೆ ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ 1077 ಗೂ ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿ ಪಾಟೀಲ ತಿಳಿಸಿದ್ದಾರೆ.

    ಸಹಕರಿಸದಿದ್ದರೆ ಕ್ರಮ
    ನಿಷೇಧಿತ ಪ್ರದೇಶಗಳಲ್ಲಿನ ಅಂಗಡಿ, ಮಳಿಗೆ, ದಾಸ್ತಾನು ಕೇಂದ್ರಗಳನ್ನು ಮುಚ್ಚಲು (ದಿನಸಿ, ಹಾಲು, ಹಣ್ಣು, ತರಕಾರಿ, ಔಷಧ ಅಂಗಡಿ ಹೊರತುಪಡಿಸಿ) ಮೇಲ್ಕಂಡ ತಂಡ ಕ್ರಮಕೈಗೊಳ್ಳಬೇಕು. ನಿಷೇಧಿತ ಪ್ರದೇಶದಲ್ಲಿ ಅಗತ್ಯ ವಸ್ತುಗಳಾದ ದಿನಸಿ, ಹಾಲು, ಹಣ್ಣು ಮತ್ತು ತರಕಾರಿಗಳನ್ನು ಪ್ರತಿದಿನ ಬೆಳಗ್ಗೆ 8 ರಿಂದ ಬೆಳಗ್ಗೆ 10ರ ವರೆಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು, ಸದರಿ ಪ್ರದೇಶದ ಶುಚಿತ್ವ ಕಾಪಾಡಲು, ಪೊಲೀಸ್ ಮತ್ತು ಇತರೆ ಇಲಾಖೆಗಳೊಂದಿಗೆ ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಲು ಮತ್ತು ಸಹಾಯವಾಣಿ ಮೂಲಕ ಕೋರುವ ಸಾಮಗ್ರಿಗಳನ್ನು ಮನೆಮನೆಗೆ ತಲುಪಿಸುವ ಕಾರ್ಯವನ್ನು ಮಾಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

    ನಿರ್ಲಕ್ಷೃ-ಬೇಜವಾಬ್ದಾರಿ ತೋರಿಸುವ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ನಿಯಮಾನುಸಾರ ಕ್ರಮಕೈಗೊಳ್ಳುವುದಾಗಿ ತಿಳಿಸಿರುವ ಅವರು ಸಾರ್ವಜನಿಕರು ಕೂಡ ಸಿಬ್ಬಂದಿಯೊಂದಿಗೆ ಸಹಕರಿಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವಶ್ಯಕ ಸಹಕಾರ ನೀಡಬೇಕು. ಅನುಚಿತ ವರ್ತನೆ ತೋರಿದಲ್ಲಿ ಮತ್ತು ಮಾಹಿತಿ ನೀಡದೇ ಇದ್ದ ಪಕ್ಷದಲ್ಲಿ ಸೂಕ್ತ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.

    ಅಧಿಕಾರಿಗಳ ಸಭೆ
    ಕರೊನಾ ಪಾಸಿಟಿವ್ ಪ್ರಕರಣ ಪತ್ತೆಯಾದ ಹಿನ್ನೆಲೆ ಮತ್ತಷ್ಟು ಜಾಗೃತಗೊಂಡಿರುವ ಜಿಲ್ಲಾಡಳಿತ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮುಂಜಾಗ್ರತೆ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿತು.

    ಜಿಲ್ಲೆಗೆ ಈವರೆಗೆ ವಿದೇಶ ಮತ್ತು ಇತರ ಕಡೆಯಿಂದ ಬಂದ 467 ಜನರ ಮೇಲೆ ತೀವ್ರ ನಿಗಾ ಇಡಲಾಗಿದ್ದು, 258 ಜನ 28 ದಿನಗಳ ಅವಧಿ ಪೂರ್ಣಗೊಳಿಸಿದ್ದಾರೆ. 138 ಜನ ರಿಪೋರ್ಟಿಂಗ್ ಅವಧಿಯಲ್ಲಿದ್ದು, 71 ಜನ ಗೃಹಬಂಧನದಲ್ಲಿದ್ದಾರೆ. ಈವರೆಗೆ ಕಳುಹಿಸಲಾದ 110 ಗಂಟಲು ದ್ರವ ಮಾದರಿಗಳ ಪೈಕಿ 81 ಪರೀಕ್ಷಾ ವರದಿ ಲಭಿಸಿದೆ ಎಂದು ಜಿಲ್ಲಾಧಿಕಾರಿ ಸಭೆಗೆ ತಿಳಿಸಿದರು.

    ಮುಂಬರುವ ದಿನಗಳಲ್ಲಿ ಎಲ್ಲರೂ ಕರೊನಾ ನಿಯಂತ್ರಣಕ್ಕಾಗಿ ಜವಾಬ್ದಾರಿಯುತ ಕಾರ್ಯ ನಿರ್ವಹಸಿಬೇಕೆಂದು ಮನವಿ ಮಾಡಿದರು. ಎಸ್‌ಪಿ ಅನುಪಮ್ ಅಗರವಾಲ್, ಜಿಪಂ ಸಿಇಒ ಗೋವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್, ಡಿಎಚ್‌ಒ ಡಾ. ಮಹೇಂದ್ರ ಕಾಪಸೆ, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಡಾ.ಮುಕುಂದ ಗಲಗಲಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶರಣಪ್ಪ ಕಟ್ಟಿ, ಆಹಾರ ಇಲಾಖೆ ಜಂಟಿ ನಿರ್ದೇಶಕಿ ಸುರೇಖಾ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಮಲ್ಲನಗೌಡ ಬಿರಾದಾರ, ಡಾ. ಧಾರವಾಡಕರ, ಡಾ. ಲಕ್ಕಣ್ಣವರ್, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಪ್ರಾಣೇಶ ಜಾಹಗೀರದಾರ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts