More

    ಲಕ್ಷ ದಾಟಿದ ಗಂಟಲು ದ್ರವ ಪರೀಕ್ಷೆ

    ವಿಜಯಪುರ : ಜಿಲ್ಲೆಯಲ್ಲಿ ಪ್ರತಿದಿನ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಲಕ್ಷಕ್ಕೂ ಅಧಿಕ ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಮಂಗಳವಾರ 138 ಜನರಲ್ಲಿ ಕರೊನಾ ಸೋಂಕು ದೃಢವಾಗಿದೆ. ರೋಗದಿಂದ ಚೇತರಿಕೆಯಾದ 81 ಜನರು ಬಿಡುಗಡೆಗೊಂಡಿದ್ದು, ಒಬ್ಬರು ಮೃತಪಟ್ಟಿದ್ದಾರೆ.

    ಇಲ್ಲಿವರೆಗೆ ಒಟ್ಟು 1,03,322 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 93,472 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 521 ಜನರ ವರದಿ ಬರಬೇಕಿದೆ. 611 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 1,01,190 ಜನರ ಮೇಲೆ ನಿಗಾ ವಹಿಸಲಾಗಿದೆ. 89,643 ಜನರು ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. 2829 ಜನರು ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. ಈವರೆಗೆ ಸೋಂಕಿತರ ಸಂಖ್ಯೆ 9329ಕ್ಕೆ ಏರಿಕೆ ಆಗಿದ್ದು, 8555 ಜನರು ಗುಣಮುಖರಾಗಿದ್ದಾರೆ. 162 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ತಿಳಿಸಿದ್ದಾರೆ.



    ಲಕ್ಷ ದಾಟಿದ ಗಂಟಲು ದ್ರವ ಪರೀಕ್ಷೆ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts