More

    ಸರ್ಕಾರದ ಯೋಜನೆಗಳು ತಲುಪಲಿ

    ವಿಜಯಪುರ: ರಾಜ್ಯದಲ್ಲಿರುವ ನೌಕರರ ಅನೇಕ ಬೇಡಿಕೆಗಳನ್ನು ಈಡೇರಿಸುವುದರೊಂದಿಗೆ ಸಂಘ ತನ್ನದೇ ಆದ ಛಾಪು ಮೂಡಿಸಿದೆ. ಸರ್ಕಾರದ ಯೋಜನೆಗಳನ್ನು ತಲುಪಿಸುವಂತಹ ಪ್ರ್ರಾಮಾಣಿಕ ಕೆಲಸವನ್ನು ಸಂಘದ ಮಾಡಬೇಕು ಎಂದು ಕೂಡಲಸಂಗಮದ ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
    ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಸರ್ಕಾರಿ ನೌಕರರ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಕೆಲಸದಲ್ಲಿ ಮಾನವೀಯತೆ ಮತ್ತು ಪಾರದರ್ಶಕವಾಗಿ ಆಡಳಿತ ನೀಡುವಂತೆ ಮಾರ್ಗದರ್ಶನ ಮಾಡಿದರು.
    ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ ಶಡಶ್ಯಾಳ ಮಾತನಾಡಿ, ಜಿಲ್ಲೆಯ ನೌಕರರಿಗೆ ಅನೇಕ ಸವಲತ್ತುಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಘ ಮುನ್ನುಡಿ ಬರೆಯುತ್ತಿದೆ. ನೌಕರರಿಗೆ ರಿಯಾಯಿತಿ ದರದಲ್ಲಿ ಅತ್ಯಂತ ಉತ್ಕೃಷ್ಟ ಹಾಗೂ ಗುಣಮಟ್ಟದ ಗೃಹಬಳಕೆ ಹಾಗೂ ದಿನಸಿ ವಸ್ತುಗಳನ್ನು ಪೂರೈಸಲು ಕ್ಯಾಂಟೀನ್ ನಿರ್ಮಿಸಲಾಗಿದೆ ಎಂದು ತಿಳಿಸಿದರು.

    ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿದರು. ಖಜಾಂಚಿ ಜುಬೇರ ಕೆರೂರ, ವಿಜಯಕುಮಾರ ಹತ್ತಿ, ವಿ.ಡಿ,ಬೆಳ್ಳೆಣ್ಣವರ, ಎಸ್.ಆರ್. ಕಟ್ಟಿಮನಿ, ಸಂತೋಷ ಹೂಗಾರ, ಎಸ್.ಎಸ್. ಮಾನೆ ಇನ್ನಿತರರಿದ್ದರು.

    ಸರ್ಕಾರದ ಯೋಜನೆಗಳು ತಲುಪಲಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts