More

    ಮಹಿಳೆಯರಿಗಾಗಿ ಪೂರಕ ಚಟುವಟಿಕೆ ಕೈಗೊಳ್ಳಿ

    ವಿಜಯಪುರ: ಕರೊನಾ ನಿಯಂತ್ರಣಕ್ಕಾಗಿ ಮಹಿಳೆಯರ ಮತ್ತು ಮಕ್ಕಳಿಗೆ ಅನುಕೂಲವಾಗುವ ಚಟುವಟಿಕೆ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚನೆ ನೀಡಿದರು.
    ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡ 2020-21 ನೇ ಸಾಲಿನ ಜಿಲ್ಲಾಮಟ್ಟದ ವಿಶೇಷ ಕಾರ್ಯಪಡೆ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂದಿನ ಮೂರು ತಿಂಗಳುಗಳ ಅವಧಿಗೆ ರೂಪಿಸಿರುವ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯುವ ಜತೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಮಹಿಳಾ ಶಕ್ತಿ ಕೇಂದ್ರದ ಸಿಬ್ಬಂದಿಗೆ ಸೂಚನೆ ನೀಡಿದರು.

    ಕ್ರಿಯಾಯೋಜನೆಯನ್ವಯ ಸಾಂಕ್ರಾಮಿಕ ರೋಗ, ಕೋವಿಡ್ ನಿಯಂತ್ರಣಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರೊಂದಿಗೆ ಮಹಿಳೆಯರಲ್ಲಿ ಜಾಗೃತಿ, ಗ್ರಾಮ ಹಾಗೂ ತಾಲೂಕುಮಟ್ಟದಲ್ಲಿ ಮಹಿಳೆಯರಲ್ಲಿ ವಿವಿಧ ಸಾಲ ಸೌಲಭ್ಯ, ಸಣ್ಣ ಹಣಕಾಸು ಉದ್ದಿಮೆ, ಸಾಮಾಜಿಕ ಅನಿಷ್ಠ ಪದ್ಧತಿಗಳಾದ ಬಾಲ್ಯವಿವಾಹ ನಿರ್ಮೂಲನೆ ಸೇರಿದಂತೆ ಆರೋಗ್ಯ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವಂತೆ ತಿಳಿಸಿದರು.

    ಬೇಟಿ ಬಚಾವೋ, ಬೇಟಿ ಪಢಾವೋ(ಮಗಳನ್ನು ಉಳಿಸಿ, ಮಗಳನ್ನು ಓದಿಸಿ) ಯೋಜನೆಯಡಿ ಪೋಷಣ ಅಭಿಯಾನ ಅಂಗವಾಗಿ ನಡೆಯುವ ಲಸಿಕಾ ಕಾರ್ಯಕ್ರಮದ ಸಂದರ್ಭದಲ್ಲಿ ಕೋವಿಡ್ ಮುನ್ನೆಚ್ಚರಿಕೆ ಮತ್ತು ಮಗಳಿಗೆ ಶಿಕ್ಷಣ ನೀಡುವ ಮತ್ತು ರಕ್ಷಣೆ ಕುರಿತಂತೆ ಸೂಕ್ತ ಅರಿವು ಪಾಲಕರಲ್ಲಿ ಮೂಡಿಸಬೇಕು ಎಂದು ಜಿಲ್ಲಾ ಟಾಸ್ಕ್ ೆರ್ಸ್ ಸಮಿತಿ ಸಭೆಯಲ್ಲಿ ಸೂಚನೆ ನೀಡಿದರು.

    2020-21 ನೇ ಸಾಲಿನ ಕ್ರಿಯಾಯೋಜನೆಯನ್ವಯ ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಾರ್ಡ್ ಮತ್ತು ಜಿಲ್ಲಾ ಮಟ್ಟದ ವ್ಯಾಪ್ತಿಯಲ್ಲಿ ಸಮೂಹ ಮಾಧ್ಯಮಗಳ ಮೂಲಕ ಅರಿವು ಮೂಡಿಸಬೇಕು.

    ಜಿಲ್ಲೆಯಲ್ಲಿ ಪ್ರತಿ ಗ್ರಾಮವಾರು ಗ್ರಾಮಸ್ಥರಲ್ಲಿ ಬಾಲ್ಯವಿವಾಹ ನಿಷೇಧ ಕುರಿತು ಜಾಗೃತಿ ಮೂಡಿಸಬೇಕು. ಸ್ಥೈರ್ಯ ಯೋಜನೆಯಡಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಆರ್ಥಿಕ ಪರಿಹಾರ, ಮರಣ ಪರಿಹಾರ, ಆ್ಯಸಿಡ್ ದಾಳಿಗೆ ಒಳಗಾದ ಮಹಿಳೆಯರು, ಹೆಣ್ಣು ಮಕ್ಕಳಿಗೆ ಮರಣ ಪರಿಹಾರ ಸೇರಿದಂತೆ ಸೂಕ್ತ ಪರಿಹಾರಗಳ ಬಗ್ಗೆ ಚರ್ಚಿಸಿದರು.

    ಜಿಪಂ ಸಿಇಒ ಗೋವಿಂದ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಸ್.ಆಲಗೂರ, ಇತರ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

    ಮಹಿಳೆಯರಿಗಾಗಿ ಪೂರಕ ಚಟುವಟಿಕೆ ಕೈಗೊಳ್ಳಿ
    ಮಹಿಳೆಯರಿಗಾಗಿ ಪೂರಕ ಚಟುವಟಿಕೆ ಕೈಗೊಳ್ಳಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts