More

    ಪ್ರಣಬ್ ಮುಖರ್ಜಿ ಕೊಡುಗೆ ಅಪಾರ

    ವಿಜಯಪುರ: ಮಾಜಿ ರಾಷ್ಟ್ರಪತಿ, ಭಾರತ ರತ್ನ, ಕಾಂಗ್ರೆಸ್ ಪಕ್ಷದ ನಾಯಕ ದಿ.ಪ್ರಣಬ್ ಮುಖರ್ಜಿ ನಿಧನದಿಂದಾಗಿ ದೇಶ ಒಬ್ಬ ಮಹಾನ್ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ ಘೋಣಸಗಿ ಹೇಳಿದರು.
    ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ದಿ.ಪ್ರಣಬ್ ಮುಖರ್ಜಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಮುಖರ್ಜಿ ಅವರು ದೇಶಕ್ಕೆ ಅಪಾರ ಕೊಡುಗೆ ನೀಡಿದಂತಹ ಧೀಮಂತ ನಾಯಕರಾಗಿದ್ದರು. ಅಪಾರ ಜ್ಞಾನ ಹೊಂದಿದ ರಾಷ್ಟ್ರೀಯ ನಾಯಕರಲ್ಲಿ ಒಬ್ಬರಾಗಿದ್ದರು. ದೇಶದ ಅತ್ಯುನ್ನತ ಪ್ರಶಸ್ತಿ ಸೇರಿ ಹಲವಾರು ವಿಶ್ವವಿದ್ಯಾಲಯಗಳಿಂದ ಡಾಕ್ಟರೇಟ್ ಪದವಿಗಳು ಅವರಿಗೆ ಲಭಿಸಿದ್ದವು. ಐದು ಬಾರಿ ರಾಜ್ಯಸಭೆ ಸದಸ್ಯರಾಗಿ ಹಾಗೂ ಎರಡು ಬಾರಿ ಲೋಕಸಭೆ ಸದಸ್ಯರಾಗಿದ್ದ ಅವರು, ಕೇಂದ್ರ ಸರ್ಕಾರದಲ್ಲಿ ಹಣಕಾಸು, ವಿದೇಶಾಂಗ, ಬೃಹತ್ ಕೈಗಾರಿಕೆ, ಕಂದಾಯ ಸಚಿವರಾಗಿ, ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿ, ವಿರೋಧ ಪಕ್ಷದ ನಾಯಕರಾಗಿ ಕಾಂಗ್ರೆಸ್ ಪಕ್ಷಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ನಮ್ಮನ್ನು ಅಗಲಿದ್ದು ದೇಶಕ್ಕೆ ತುಂಬ ಅಘಾತವನ್ನುಂಟುಮಾಡಿದೆ ಎಂದು ತಿಳಿಸಿದರು.
    ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಬ್ದುಲ್‌ಖಾದರ್ ಖಾದಿಮ್ ಮಾತನಾಡಿ, ಮುಖರ್ಜಿ ಅವರ ನಿಧನದಿಂದ ಕಾಂಗ್ರೆಸ್‌ಗೆ ತುಂಬಲಾರದ ನಷ್ಟ ಉಂಟಾಗಿದೆ. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ. ಅವರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರು ಹಾಕಿಕೊಟ್ಟಂತಹ ಮಾರ್ಗದಲ್ಲಿ ಸಾಗಿ ಪಕ್ಷ ಕಟ್ಟೋಣ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.

    ಜಿಲ್ಲಾ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ವಿಜಯಪುರ ನಗರ ಬ್ಲಾಕ್ ಅಧ್ಯಕ್ಷ ಜಮೀರ್‌ಅಹ್ಮದ್ ಬಕ್ಷೀ, ಜಲನಗರ ಬ್ಲಾಕ್ ಅಧ್ಯಕ್ಷೆ ಆರತಿ ಶಹಾಪೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಬ್ಬೀರ ಜಾಗೀರದಾರ, ವಸಂತ ಹೊನಮೊಡೆ, ಐ.ಎಂ.ಇಂಡಿಕರ, ಈರಪ್ಪ ಜಕ್ಕಣ್ಣವರ, ಕಾರ್ಯದರ್ಶಿಗಳಾದ ದಾವಲಸಾಬ ಬಾಗವಾನ, ಇಲಿಯಾಸ ಸಿದ್ದಿಕಿ, ತಾಜುದ್ದೀನ ಖಲೀಪ, ನಿಂಗಪ್ಪ ಸಂಗಾಪೂರ, ಧನರಾಜ ಎ. ಇತರರು ಭಾಗವಹಿಸಿದ್ದರು.

    ಪ್ರಣಬ್ ಮುಖರ್ಜಿ ಕೊಡುಗೆ ಅಪಾರ
    ಪ್ರಣಬ್ ಮುಖರ್ಜಿ ಕೊಡುಗೆ ಅಪಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts