More

    ಸಕಾಲಕ್ಕೆ ಸೇವೆ ಸಲ್ಲಿಸದಿದ್ದರೆ ಕಠಿಣ ಕ್ರಮ

    ವಿಜಯಪುರ: ಆಯುಷ್ಮಾನ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಅರ್ಹ ಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಇನ್ನೂ ಚುರುಕಾಗಿ ಕಾರ್ಯ ನಿರ್ವಸುವಂತೆ ಬೆಂಗಳೂರು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕಿ ಎನ್.ಟಿ. ಅಬ್ರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
    ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಕುರಿತ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.
    ಆಯುಷ್ಮಾನ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಣಿಯಾಗಿರುವ ಅರ್ಹ ರೋಗಿಗಳಿಗೆ ಕಡ್ಡಾಯವಾಗಿ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು. ಕ್ಲೇಮ್‌ಗಳಿಗಾಗಿ ತಕ್ಷಣ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ಸಲ್ಲಿಸಿದಲ್ಲಿ 10 ಗಂಟೆಯೊಳಗೆ ಚಿಕಿತ್ಸಾ ವೆಚ್ಚ ಭರಿಸಲಾಗುವುದು ಎಂದು ತಿಳಿಸಿದರು.
    ಆಯುಷ್ಮಾನ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ನಿಗದಿತ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಇನ್ನು ಮುಂದೆ ಪ್ರತಿದಿನ ಕನಿಷ್ಠ 30 ಅರ್ಹ ಲಾನುಭವಿಗಳಿಗೆ ಜಿಲ್ಲಾಸ್ಪತ್ರೆಗಳಲ್ಲಿ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು. ಅವಶ್ಯಕ ಸಂಪನ್ಮೂಲ ಏಜೆನ್ಸಿಗಳ ಮೂಲಕ ಸಿಬ್ಬಂದಿ ಕೊರತೆಯನ್ನು ನೀಗಿಸಿಕೊಳ್ಳುವಂತೆ ತಿಳಿಸಿದ ಅವರು, ಕಾಲಕಾಲಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.
    ಜಿಲ್ಲಾಸ್ಪತ್ರೆ ಸೇರಿದಂತೆ ವಿವಿಧ ತಾಲೂಕು ಆಸ್ಪತ್ರೆಗಳ ವ್ಯಾಪ್ತಿಯಲ್ಲಿ ಈ ಯೋಜನೆಯಡಿ ಅರ್ಹ ಲಾನುಭವಿಗಳ ಚಿಕಿತ್ಸಾ ವೆಚ್ಚ ಭರಿಸುವ ಕುರಿತಂತೆ ವರದಿಗಳನ್ನು ತಕ್ಷಣ ಸಲ್ಲಿಸುವಂತೆ ತಿಳಿಸಿದ ಅವರು, ನಿರ್ಲಕ್ಷೃ ತೋರುವ ತಾಲೂಕು ಆರೋಗ್ಯ ಅಧಿಕಾರಿಗಳನ್ನು ಅಮಾನತು ಮಾಡುವುದಾಗಿ ಎಚ್ಚರಿಸಿದರು.
    ಜಿಲ್ಲಾಸ್ಪತ್ರೆಗೆ ಸರ್ಕಾರದಿಂದ ಎಲ್ಲ ಮೂಲ ಸೌಲಭ್ಯ ಕಲ್ಪಿದರೂ ಈ ಯೋಜನೆಯಡಿ ನಿಗದಿತ ಗುರಿ ಸಾಧಿಸದ ಬಗ್ಗೆ ಪರಿಶೀಲಿಸಿದ ಅವರು ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆ ವ್ಯಾಪ್ತಿಯಲ್ಲಿ ಸೂಕ್ತ ಪ್ರಗತಿ ಸಾಧಿಸಬೇಕು. ಅದರಂತೆ ಶಸ ಚಿಕಿತ್ಸಾ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಲಕರಣೆ ಆಧಾರಿತ ನಿಗದಿತ ಪ್ರಗತಿ ಸಾಧಿಸುವಂತೆ ತಿಳಿಸಿದರು.
    ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಪ್ರತಿ ಗುರುವಾರ ಆಯುಷ್ಮಾನ್ ಭಾರತ – ಆರೋಗ್ಯ ಕರ್ನಾಟಕ ಯೋಜನೆ ಅಡಿ ಸಾಧಿಸಿದ ಪ್ರಗತಿ ಪರಿಶೀಲಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳು ಗುರಿಗೆ ತಕ್ಕಂತೆ ಪ್ರಗತಿ ಸಾಧಿಸುವಂತೆ ಸೂಚಿಸಿದರು.
    ಡಿಎಚ್‌ಒ ಮಹೇಂದ್ರ ಕಾಪಸೆ, ಜಿಲ್ಲಾ ಶಸ ಚಿಕಿತ್ಸಕ ಡಾ.ಶರಣಪ್ಪ ಕಟ್ಟಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts