More

    ಇಂದು ಬಿಜೆಪಿ ಜನಸೇವಕ ಸಮಾವೇಶ

    ವಿಜಯಪುರ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಯ ಸಾಧಿಸಿದ ಪಕ್ಷ ಬೆಂಬಲಿತರಿಗೆ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಜ. 12 ರಂದು ನಡೆಯಲಿರುವ ಬಿಜೆಪಿ ಜನಸೇವಕ ಸಮಾವೇಶಕ್ಕೆ ದರಬಾರ ಪ್ರೌಢಶಾಲೆ ಮೈದಾನ ಸಜ್ಜಾಗಿದೆ.

    ಸೋಮವಾರ ಮಧ್ಯಾಹ್ನದಿಂದಲೇ ವೇದಿಕೆ ಸಿದ್ಧಗೊಳಿಸುವ ಕಾರ್ಯ ಆರಂಭಗೊಂಡು ಸಂಜೆ ಹೊತ್ತಿಗೆ ಸಂಪೂರ್ಣ ವೇದಿಕೆ ಸಿದ್ಧಗೊಂಡಿದ್ದು, ಅಂತಿಮ ಸ್ಪರ್ಶ ನೀಡಲಾಯಿತು. ಬಿಜೆಪಿ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

    ಮಂಗಳವಾರ ಮಧ್ಯಾಹ್ನ 3.30ಕ್ಕೆ ನಡೆಯಲಿರುವ ಸಮಾವೇಶಕ್ಕೆ ಆಗಮಿಸಲಿರುವ ಎಲ್ಲರಿಗೂ ಆಸನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಜಿಲ್ಲೆಯ ವಿವಿಧ ಗ್ರಾಪಂ ನೂತನ ಸದಸ್ಯರು, ಪರಾಜಿತರು ಹಾಗೂ ಎಲ್ಲ ಚುನಾಯಿತ ಪ್ರತಿನಿಧಿಗಳನ್ನು ಈ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಕರೊನಾ ಹಿನ್ನೆಲೆ ಪರಸ್ಪರ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಒಟ್ಟು 3 ಸಾವಿರಕ್ಕೂ ಹೆಚ್ಚು ಆಸನ ವ್ಯವಸ್ಥೆ ಮಾಡಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಸುದ್ದಿಗಾರರಿಗೆ ತಿಳಿಸಿದರು.

    ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ವಿ. ಸೋಮಣ್ಣ, ರಮೇಶ ಜಾರಕಿಹೊಳಿ, ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ, ರಾಜ್ಯ ಕಾರ್ಯದರ್ಶಿ ತುಳಿಸಿ ಮುನಿರಾಜುಗೌಡ, ಎಸ್‌ಟಿ ಮೋರ್ಚಾ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್ ಮತ್ತಿತರರು ಭಾಗವಹಿಸುವರು ಎಂದು ಕೂಚಬಾಳ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts