More

    ಕೋವಿಡ್ ಲಸಿಕಾ ಮೇಳಕ್ಕೆ ಸಿದ್ಧತೆ ಕೈಗೊಳ್ಳಿ

    ವಿಜಯಪುರ: ಕೋವಿಡ್ ಲಸಿಕಾ ಮೇಳ ಯಶಸ್ವಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

    ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ಕೋವಿಡ್ ಲಸಿಕಾ ಮೇಳ ಕುರಿತು ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಒಂದು ಲಕ್ಷ ಜನರಿಗೆ ಲಸಿಕೆ ಹಾಕುವ ಉದ್ದೇಶದಿಂದ ಸೆ.17ರಂದು ಲಸಿಕಾ ಮೇಳ ನಡೆಯಲಿದೆ. ಸಂಬಂಧಪಟ್ಟ ಅಧಿಕಾರಿಗಳು ಮನೆಮನೆಗೆ ತೆರಳಿ ಜನರನ್ನು ಲಸಿಕೆ ಕೊಡುವ ಕೇಂದ್ರಗಳಿಗೆ ಕರೆದುಕೊಂಡು ಬರುವ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.

    ಸೆ.17 ರಂದು ಸರಿಯಾಗಿ ವಾಹನದ ವ್ಯವಸ್ಥೆ, ಲಸಿಕಾ ಕೇಂದ್ರಗಳು ವ್ಯವಸ್ಥೆ, ಸಿಬ್ಬಂದಿ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಸಂಬಂಧಪಟ್ಟ ಅಧಿಕಾರಿಗಳು ಮುಂಚಿತವಾಗಿ ಸರ್ವ ಸನ್ನದ್ಧ ರೀತಿಯಲ್ಲಿ ತಯಾರಿ ಮಾಡಿಕೊಳ್ಳಬೇಕು ಎಂದರು.

    ಜಿಪಂ ಸಿಇಒ ಗೋವಿಂದ ರೆಡ್ಡಿ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸಭೆಗಳನ್ನು ನಡೆಸಿ ಲಸಿಕೆ ಪಡೆಯದವರ ಮಾಹಿತಿಯನ್ನು ಪಡೆದು ಲಸಿಕೆ ಹಾಕಿಕೊಳ್ಳುವಂತೆ ಮನೆಮನೆಗೆ ತೆರಳಿ ತಿಳಿ ಹೇಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

    ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜಕುಮಾರ ಯರಗಲ್, ಡಾ.ಕವಿತಾ ದೊಡಮನಿ, ಡಾ. ಮಹೇಶ ನಾಗರಬೆಟ್ಟ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts