More

    ಜನರು ಆತಂಕಪಡುವ ಅಗತ್ಯವಿಲ್ಲ

    ವಿಜಯಪುರ: ವಿದೇಶ ಸೇರಿದಂತೆ ಇತರ ಜಿಲ್ಲೆ, ರಾಜ್ಯಗಳಿಂದ ಸೋಮವಾರ ಮಧ್ಯಾಹ್ನದವರೆಗೆ ಜಿಲ್ಲೆಗೆ 418 ಜನರು ಆಗಮಿಸಿರುವ ಬಗ್ಗೆ ವರದಿಯಾಗಿದ್ದು, ಈವರೆಗೆ 59 ಜನರ ಗಂಟಲು ದ್ರವ ಮಾದರಿಗಳನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಆ ಪೈಕಿ 57 ಜನರ ವರದಿ ನೆಗೆಟಿವ್ ಬಂದಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.

    ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 216 ಜನರು 28 ದಿನಗಳ ಅವಧಿ ಪೂರ್ಣಗೊಳಿಸಿದ್ದು, 172 ಜನರು 15 ರಿಂದ 28 ದಿನಗಳ ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. ಒಟ್ಟು 30 ಜನರು ಗೃಹಬಂಧನದಲ್ಲಿದ್ದು, 9 ಜನರು ಆಸ್ಪತ್ರೆಯ ಐಸೋಲೇಷನ್‌ದಲ್ಲಿದ್ದಾರೆ. ಇನ್ನು 2 ವೈದ್ಯಕೀಯ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ತಿಳಿಸಿದರು.

    ರಾಜ್ಯ ಸರ್ಕಾರದ ಆದೇಶದಂತೆ ಮಂಗಳವಾರದಿಂದ ಬೇಕರಿ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಪಾರ್ಸಲ್ ಮೂಲಕ ಮಾತ್ರ ಸಾರ್ವಜನಿಕರು ಪಡೆದುಕೊಳ್ಳಬಹುದಾಗಿದೆ. ತರಕಾರಿ ಮತ್ತು ಹಣ್ಣುಗಳ ಮಾರಾಟದ ಸಂದರ್ಭದಲ್ಲಿ ಕಟ್ಟುನಿಟ್ಟಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದ್ದು, ಜಿಲ್ಲಾಡಳಿತದಿಂದ ಇನ್ನು ಮುಂದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

    ಜಿಲ್ಲಾ ಪೊಲೀಸ್ ಅಧೀಕ್ಷಕ ಅನುಪಮ ಅಗರವಾಲ್ ಮಾತನಾಡಿ, ಜಿಲ್ಲೆಗೆ ಜನವರಿಯಿಂದ ಮಾರ್ಚ್‌ವರೆಗೆ, ಇತರ ಜಿಲ್ಲೆ, ರಾಜ್ಯಗಳಿಂದ ತಬ್ಲಿ ಜಮಾತ್‌ಗೆ ಸಂಬಂಧಿಸಿದ 375 ಜನರು ಬಂದಿರುವ ಬಗ್ಗೆ ಗುರುತಿಸಲಾಗಿದೆ. ಶೋಧಕಾರ್ಯ ಮುಂದುವರಿದಿದೆ. ಜಿಲ್ಲಾ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಸಹ ಕೈಗೊಳ್ಳಲಾಗಿದೆ. ಜಲನಗರದಲ್ಲಿ ಅನಧಿಕೃತವಾಗಿ ಪಾಸ್‌ಗಳನ್ನು ಸರಬರಾಜು ಮಾಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಇಂತಹ ಚಟುವಟಿಕೆ ಬಗ್ಗೆ ಪೊಲೀಸ್ ಇಲಾಖೆ ಗಮನಕ್ಕೆ ತರುವಂತೆ ಮನವಿ ಮಾಡಿದರು.
    ಜಿಪಂ ಸಿಇಒ ಗೋವಿಂದ ರೆಡ್ಡಿ ಮತ್ತಿತರರಿದ್ದರು.



    ಜನರು ಆತಂಕಪಡುವ ಅಗತ್ಯವಿಲ್ಲ
    ಜನರು ಆತಂಕಪಡುವ ಅಗತ್ಯವಿಲ್ಲ
    ಜನರು ಆತಂಕಪಡುವ ಅಗತ್ಯವಿಲ್ಲ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts