More

    ಸಚಿವೆ ಶಶಿಕಲಾ ಜೊಲ್ಲೆ ಪ್ರವಾಸ

    ವಿಜಯಪುರ: ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಬುಧವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಬೆಳಗ್ಗೆ 11ಕ್ಕೆ ಇಂಡಿ ತಾಲೂಕು ಕಚೇರಿಗೆ ಭೇಟಿ ನೀಡಿ ಕರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸುವರು.

    ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ಆ ಬಳಿಕ ಸಿಂದಗಿಗೆ ಪ್ರಯಾಣ ಬೆಳೆಸುವರು. ಮಧ್ಯಾಹ್ನ 1.45ಕ್ಕೆ ಸಿಂದಗಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಅಲ್ಲಿಂದ ದೇ.ಹಿಪ್ಪರಗಿಗೆ ಭೇಟಿ ನೀಡಿ ಸಂಜೆ 4.15ಕ್ಕೆ ಸರ್ಕಾರಿ ಅತಿಥಿ ಗೃಹದಲ್ಲಿ ಅಧಿಕಾರಿಗಳ ಸಭೆ ನಡೆಸುವರು. ಬಳಿಕ ಬೆಳಗಾವಿಗೆ ಪ್ರಯಾಣ ಬೆಳೆಸುವರೆಂದು ಪ್ರಕಟಣೆ ತಿಳಿಸಿದೆ.

    ವಾಸ್ತವ್ಯ ಇಲ್ಲ
    ಕರೊನಾ ಸಂಕಷ್ಟದಲ್ಲಿ ಜಿಲ್ಲೆಯಲ್ಲಿಯೇ ಬೀಡು ಬಿಟ್ಟು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಸಿಎಂ ಯಡಿಯೂರಪ್ಪ ತಿಳಿಸಿದ್ದರೂ ಸಚಿವೆ ಶಶಿಕಲಾ ಜೊಲ್ಲೆ ಮಾತ್ರ ನಕಾರ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಜಿಲ್ಲೆಯಲ್ಲಿ ಯಾವಾಗ ಠಿಕಾಣಿ ಹೂಡಬೇಕೆಂಬುದು ತಮಗೆ ಗೊತ್ತಿದೆ. ಸದ್ಯಕ್ಕೆ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದರು. ಇದೀಗ ಮಂಗಳವಾರ ಯಡಿಯೂರಪ್ಪ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲಿಯೇ ಇದ್ದುಕೊಂಡು ಸಮಸ್ಯೆ ಆಲಿಸಬೇಕೆಂದು ತಿಳಿಸಿದ್ದಾರೆ. ಅದಾಗ್ಯೂ ಸಚಿವರ ಪ್ರವಾಸ ಕಾರ್ಯಕ್ರಮದ ಪಟ್ಟಿ ನೋಡಿದರೆ ಮತ್ತೆ ಜಿಲ್ಲೆಯ ಪಾಲಿಗೆ ಇವರು ‘ಅತಿಥಿ’ಯಾಗಿದ್ದಾರೆ ಎನ್ನಿಸದೆ ಇರದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts