More

    ಬಸವಣ್ಣ ಅವರ ವಚನಗಳು ಜಗತ್ತಿಗೆ ಮಾದರಿ

    ವಿಜಯಪುರ: ಜಗಜ್ಯೋತಿ, ವಿಶ್ವಗುರು ಬಸವಣ್ಣನವರ ಸಪ್ತಸೂತ್ರ ವಚನಗಳು ಇಂದಿನ ಸಮಾಜಕ್ಕೆ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.

    ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವಗುರು ಜಗಜ್ಯೋತಿ ಬಸವಣ್ಣ ಅವರ ಜಯಂತಿ ಅಂಗವಾಗಿ ಬಸವಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ, ಗೌರವ ಅರ್ಪಿಸಿ ಅವರು ಮಾತನಾಡಿದರು.

    ಮಹಿಳೆಯರ ಸಮಾನತೆ ಹಾಗೂ ಹಕ್ಕುಗಳಿಗಾಗಿ ಧ್ವನಿ ಎತ್ತಿದವರು, ಲಿಂಗ ಬೇಧ ಮರೆತು ಮಾನವರ ಏಕತೆಗಾಗಿ ಹೋರಾಟ ಮಾಡಿ ದುಡಿಯುವ ವರ್ಗಕ್ಕಾಗಿ, ಕಾಯಕ ಜೀವಿಗಳಿಗಾಗಿ, ನೊಂದವರ ಏಳಿಗೆಗಾಗಿ ಅವಿರತ ಶ್ರಮಿಸಿದ ಅವರು ಧರ್ಮವನ್ನು ಉಳಿಸಿ ಬೆಳೆಸಬೇಕು. ಬಸವಣ್ಣನವರ ಆದರ್ಶ, ತತ್ವಗಳು, ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

    ಕಾರ್ಯಕ್ರಮಕ್ಕೂ ಮೊದಲು ನಗರದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರರ ಅಶ್ವಾರೂಢ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಪಂ ಸಿಇಒ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್, ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ, ಡಿಎಸ್‌ಪಿ ಲಕ್ಷ್ಮೀ ನಾರಾಯಣ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೊದ್ದಾರ, ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ, ತಹಸಿಲ್ದಾರ್ ಮೋಹನ ಕುಮಾರಿ, ವಿವಿಧ ಸಮಾಜದ ಮುಖಂಡರಾದ ಸಿದ್ರಾಮಪ್ಪ ಉಪ್ಪಿನ, ಬಸಯ್ಯ ಹಿರೇಮಠ, ಶರಣು ಸಬರದ, ಸೋಮನಗೌಡ ಕಲ್ಲೂರ, ಡಾ.ಬಾಬು ನಾಗೂರ, ಎಸ್.ಜಿ ನಾಗಠಾಣ, ಸಂಗು ಸಜ್ಜನ, ಅಡಿವೆಪ್ಪ ಸಾಲಗಲ್ಲ, ವಿಜಯಕುಮಾರ ಡೋಣಿ, ಜಂಬುನಾಥ ಕಂಚ್ಯಾಣಿ, ಭೀಮರಾಯ ಜಿಗಜಿಣಗಿ ಹಾಗೂ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts