ವಿಜಯಪುರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಜಿಲ್ಲೆ ಚಡಚಣ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ನೇಕಾರ ಕಾಲೋನಿಯ ಕೀರ್ತನಾ ಮಧುಕರ (21)ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ವಿಜಯಪುರದ ಬಿಎಲ್ಡಿಇ ನರ್ಸಿಂಗ್ ಕಾಲೇಜ್ನಲ್ಲಿ ದ್ವಿತೀಯ ವರ್ಷದ ನರ್ಸಿಂಗ್ ಓದುತ್ತಿದ್ದರು.
ಮೊದಲ ವರ್ಷದ ಅಂತಿಮ ಪರೀಕ್ಷೆ ಬರೆದು ಎರಡನೇ ವರ್ಷಕ್ಕೆ ದಾಖಲಾತಿ ಪಡೆದಿದ್ದಳು ಎನ್ನಲಾಗಿದೆ. ಇತ್ತೀಚಿಗೆ ಮೊದಲು ವರ್ಷದ ಅಂತಿಮ ಪರೀಕ್ಷೆಯ ಫಲಿತಾಂಶ ಬಂದಾಗ ನಿರೀಕ್ಷೆಯಷ್ಟು ಅಂಕಗಳು ಬಂದಿರಲಿಲ್ಲ, ಇದರಿಂದ ಮನನೊಂದಿದ್ದ ಕೀರ್ತನಾ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕೀರ್ತನಾ ಅವರ ತಂದೆ ಜಾಲೇಂದ್ರನಾಥ ಮಗಳ ಆತ್ಮಹತ್ಯೆ ಬಗ್ಗೆ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ. (ದಿಗ್ವಿಜಯ ನ್ಯೂಸ್)
ಸೂರ್ಯಕುಮಾರ್ರನ್ನು ಸುಲಭವಾಗಿ ಔಟ್ ಮಾಡುವುದು ಹೇಗೆ? ಪಾಕ್ ಮಾಜಿ ಆಟಗಾರ ಕೊಟ್ಟ ಸಲಹೆ ಇದು
ಕಾಂಡೋಮ್ ಬಳಸುವಂತೆ ಮನವಿ ಮಾಡಿದ್ರೂ ಕೇಳಲಿಲ್ಲ: ಲಂಕಾ ಕ್ರಿಕೆಟಿಗನ ಕರಾಳ ಮುಖ ಬಿಚ್ಚಿಟ್ಟ ಸಂತ್ರಸ್ತೆ