More

    ಕ್ವಾರಂಟೈನ್ ವೇಳೆ ಅಡ್ಡಿಪಡಿಸಿದರೆ ಕ್ರಮ

    ವಿಜಯಪುರ: ದೇಶದ ವಿವಿಧ ರಾಜ್ಯಗಳಿಂದ ಜಿಲ್ಲೆಗೆ ವಾಪಸ್ ಆಗುವ ಜನರನ್ನು ಕ್ವಾರಂಟೈನ್ ಮಾಡುವ ಸಂದರ್ಭದಲ್ಲಿ ಯಾರಾದರೂ ಅಡೆತಡೆ ಉಂಟುಮಾಡಿದ್ದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಎಚ್ಚರಿಕೆ ನೀಡಿದ್ದಾರೆ.
    ತಾಲೂಕಿನ ಮಹಲ- ಐನಾಪುರ ತಾಂಡಾದಲ್ಲಿ ಬೇರೆ ರಾಜ್ಯಗಳಿಂದ ಹಲವಾರು ಜನರು ಆಗಮಿಸಿದ ಹಿನ್ನೆಲೆಯಲ್ಲಿ ಕ್ವಾರಂಟೈನ್ ಮಾಡಲು ಉದ್ದೇಶ ಹೊಂದಲಾಗಿ ಶಾಲೆಯಲ್ಲಿ ಕಡಿಮೆ ಸ್ಥಳಾವಕಾಶ ಇದ್ದುದರಿಂದ ಸಮುದಾಯ ಭವನವನ್ನು ಕ್ವಾರಂಟೈನ್‌ಗಾಗಿ ಪಡೆಯುವ ಸಂದರ್ಭದಲ್ಲಿ ಖಾಸಗಿ ಶಾಲಾ ಶಿಕ್ಷಕರೊಬ್ಬರು ಅಧಿಕಾರಿಗಳಿಗೆ ಅಡ್ಡಿಪಡಿಸುವ ಜತೆಗೆ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿರುವುದರಿಂದ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಜಿಲ್ಲೆಗೆ ಮಹಾರಾಷ್ಟ್ರ, ರಾಜಸ್ಥಾನ, ವಿವಿಧ ರಾಜ್ಯಗಳಿಂದ ಬಂದಿರುವವರನ್ನು ಗ್ರಾಮ ಮತ್ತು ನಗರ ಪ್ರದೇಶ ವ್ಯಾಪ್ತಿಯಲ್ಲಿ ಕ್ವಾರಂಟೈನ್‌ಗೆ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ನಿಯಮಾವಳಿಯಂತೆ ಕರೊನಾ ರೋಗ ಹರಡದಂತೆ ಮುಂಜಾಗ್ರತೆ ವಹಿಸುವ ಉದ್ದೇಶದಿಂದ ಕ್ವಾರಂಟೈನ್ ಮಾಡಲಾಗುತ್ತಿದೆ. ಈಗ ಬೇರೆ ರಾಜ್ಯಗಳಿಂದ ಬರುತ್ತಿರುವ ಜನರು ನಮ್ಮವರೇ ಆಗಿರುವುದರಿಂದ ಕಡ್ಡಾಯವಾಗಿ ಕ್ವಾರಂಟೈನ್ ಮಾಡಿ ಕೋವಿಡ್-19 ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ವೇಳೆ ಯಾವುದೇ ರೀತಿಯ ಅಡತಡೆ ಉಂಟುಮಾಡಿದ್ದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

    ಒಬ್ಬರು ಬಿಡುಗಡೆ

    ಇಲ್ಲಿನ ಜಿಲ್ಲಾಸ್ಪತ್ರೆಯಿಂದ ಬುಧವಾರ ಸಂಜೆ ಕೋವಿಡ್-19 ರೋಗದಿಂದ ಗುಣಮುಖರಾಗಿ ಗರ್ಭಿಣಿ ಬಿಡುಗಡೆ ಹೊಂದಿದರು. 21 ವರ್ಷ ವಯೋಮಾನದ ಮಹಿಳೆ ರೋಗಿ ಸಂಖ್ಯೆ 401ಒಂಬತ್ತು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಪರಿಣಾಮಕಾರಿ ಚಿಕಿತ್ಸೆ ಮೂಲಕ ವೈದ್ಯರು ರೋಗಿಯನ್ನು ಗುಣಪಡಿಸಿದ್ದಾರೆ. ಇನ್ನುಳಿದ 14 ಜನರ ರೋಗಿಗಳ ಆರೋಗ್ಯ ಸ್ಥಿರವಾಗಿದ್ದು ಪರಿಣಾಮಕಾರಿ ಚಿಕಿತ್ಸೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

    52ಕ್ಕೇರಿದ ಸೋಂಕಿತರ ಸಂಖ್ಯೆ

    ಜಿಲ್ಲೆಯಲ್ಲಿ ಬುಧವಾರ ಮತ್ತೆ ಇಬ್ಬರಿಗೆ ಕರೊನಾ ಸೋಂಕು ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 52ಕ್ಕೆ ಏರಿಕೆ ಕಂಡಿದೆ. ಮಹಾರಾಷ್ಟ್ರದ ಮುಂಬೈನಿಂದ ಪ್ರಯಾಣ ಬೆಳೆಸಿದ್ದ 30 ವರ್ಷದ ರೋಗಿ ನಂ.944 ಹಾಗೂ 18 ವರ್ಷದ ಯುವಕ ರೋಗಿ ನಂ.945 ಸೋಂಕು ತಗಲಿರುವುದು ಪರೀಕ್ಷಾ ವರದಿಯಿಂದ ದೃಢ ಪಟ್ಟಿದೆ. ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

    2212 ಜನರ ಮೇಲೆ ನಿಗಾ

    ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 2,212 ಜನರು ಬಂದಿದ್ದು, ಅವರ ಮೇಲೆ ತೀವ್ರ ಇಡಲಾಗಿದೆ. 799 ಜನರು 28 ದಿನಗಳ ಐಸೋಲೇಷನ್ ಅವಧಿ ಪೂರ್ಣಗೊಳಿಸಿದ್ದಾರೆ. 1376 ಜನರು ರಿರ್ಪೋಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು ಮೂರು ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. 35 ಜನರು ಕೋವಿಡ್-19 ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 14 ಜನರು ಆಸ್ಪತ್ರೆಯಲ್ಲಿರುವ ಕೋವಿಡ್-19 ಸಕ್ರಿಯ ರೋಗಿಗಳಾಗಿದ್ದಾರೆ. ಈವರೆಗೆ 2,638 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 2,504 ಜನರ ನೆಗೆಟಿವ್ ವರದಿ ಬಂದಿದೆ. ಇನ್ನು 82 ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ತಿಳಿಸಿದ್ದಾರೆ.

    1200 ಜನರು ಆಗಮನ

    ಇಲ್ಲಿನ ವಿಜಯಪುರ ರೈಲು ನಿಲ್ದಾಣಕ್ಕೆ ಮೇ 15ರಂದು ಬೆಳಗಿನ ಜಾವ 4.30 ಗಂಟೆಗೆ ಸಿಂಧುದುರ್ಗದಿಂದ ರೈಲು ಮೂಲಕ 1200 ಜನರು ಆಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

    ಕ್ವಾರಂಟೈನ್ ವೇಳೆ ಅಡ್ಡಿಪಡಿಸಿದರೆ ಕ್ರಮ
    ಕ್ವಾರಂಟೈನ್ ವೇಳೆ ಅಡ್ಡಿಪಡಿಸಿದರೆ ಕ್ರಮ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts