More

    ವಿಜಯಪುರದಲ್ಲಿ ಛಲವಾದಿ ಸಮುದಾಯ ಸಮಾವೇಶ

    ಬೆಳಗಾವಿ: ರಾಜ್ಯದಲ್ಲಿ ಛಲವಾದಿ ಸಮುದಾಯವನ್ನು ಸಂಘಟಿಸುವ ದೃಷ್ಟಿಯಿಂದ ಬರುವ ಜೂನ್‌ನಲ್ಲಿ ವಿಜಯಪುರದಲ್ಲಿ ಛಲವಾದಿ ಸಮುದಾಯದ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಛಲವಾದಿ ಮಹಾಸಭಾ ರಾಜ್ಯ ಸಂಚಾಲಕ ಎಚ್.ಕೆ. ಬಸವರಾಜ ತಿಳಿಸಿದರು.

    ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಜಿಲ್ಲೆಗಳಲ್ಲಿ ಛಲವಾದಿ ಮಹಾಸಭಾದಿಂದ ಪ್ರವಾಸ ಕೈಗೊಳ್ಳಲಾಗಿದ್ದು, ಮೊದಲ ಹಂತದಲ್ಲಿ 20 ಜಿಲ್ಲೆಗಳಲ್ಲಿ ಪ್ರವಾಸ ಮುಗಿಸಿ, ಎರಡನೇ ಹಂತದಲ್ಲಿ 8 ಜಿಲ್ಲೆಗಳಲ್ಲಿ ಪ್ರವಾಸ ಆರಂಭಿಸಲಾಗಿದೆ.

    ಮುಂಬರುವ ಜೂನ್ ಮೊದಲ ವಾರ ವಿಜಯಪುರದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಜನರನ್ನು ಸೇರಿಸಿ ಛಲವಾದಿ ಸಮುದಾಯದ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು.

    ಮಹಾಸಭಾದ ಅಧ್ಯಕ್ಷ ಸಿದ್ದಯ್ಯ ಮಾತನಾಡಿ, ಹಿಂದುಳಿದ ವರ್ಗಗಳ ಆಯೋಗವು 2018ರಲ್ಲಿ ನಡೆಸಿದ ಜಾತಿ ಗಣತಿಯ ಲೆಕ್ಕಾಚಾರದ ಪ್ರಕಾರ ರಾಜ್ಯದಲ್ಲಿ ಛಲವಾದಿ ಸಮುದಾಯದ ಜನಸಂಖ್ಯೆ 1.8 ಕೋಟಿ ಮೀರಿದೆ. ಆದರೆ, 2011ರ ಜನಗಣತಿ ಪ್ರಕಾರ 96 ಲಕ್ಷ ಇದೆ. ಇದರಲ್ಲಿ ಮಾದಿಗ, ಲಂಬಾಣಿ, ಭೋವಿ ಇತರ ವರ್ಗಗಳು ಇವೆ.

    ಛಲವಾದಿ ಸಮುದಾಯದ ಜನಸಂಖ್ಯೆ 10 ಲಕ್ಷಕ್ಕೂ ಹೆಚ್ಚಿದ್ದು, ಈ ಕುರಿತು ನಿಖರವಾದ ಸಮೀಕ್ಷೆ ಆಗಬೇಕಿದೆ. ಉತ್ತರ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ ಛಲವಾದಿ ಸಮುದಾಯದ ಸಂಘಟನೆಗೆ ಆದ್ಯತೆ ನೀಡಲಾಗಿದೆ. ಮುಂಬೈ ಕರ್ನಾಟಕದ 7 ಜಿಲ್ಲೆಗಳಲ್ಲಿ ಛಲವಾದಿ ಸಮುದಾಯದ ಸಮಾವೇಶಗಳನ್ನು ನಡೆಸಲಾಗುತ್ತಿದೆ ಎಂದರು. ವೀರಭದ್ರಪ್ಪ, ನಾರಾಯಣಸ್ವಾಮಿ, ಎಂ. ಮಹಾದೇವ, ದುರ್ಗೇಶ ಮೇತ್ರಿ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts