More

    ಟಿಪ್ಪು ಅಪ್ರತಿಮ ದೇಶಭಕ್ತ

    ವಿಜಯಪುರ: ಟಿಪ್ಪು ಸುಲ್ತಾನ್ ದೇಶಕ್ಕಾಗಿ ಹೋರಾಡಿದ ಅಪ್ರತಿಮ ನಾಯಕ, ದೇಶಭಕ್ತ. ಅವರ ಆದರ್ಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಹೇಳಿದರು.
    ನಗರದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಟಿಪ್ಪು ಸುಲ್ತಾನ್ ಅವರ 270ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
    ಮುಖಂಡ ರವೀಂದ್ರ ಜಾಧವ ಮಾತನಾಡಿ, ಇತಿಹಾಸದ ಪುಟಗಳನ್ನು ನೋಡಿದಾಗ ಶೃಂಗೇರಿ ಮಹಾರಾಜರು ತಮ್ಮನ್ನು ರಕ್ಷಣೆ ಮಾಡುವಂತೆ ಟಿಪ್ಪು ಸುಲ್ತಾನ್ ಅವರಿಗೆ ಪತ್ರ ಬರೆದಾಗ, ಕೂಡಲೇ ತನ್ನ ಸೈನ್ಯವನ್ನು ಕಳಿಸಿ, ಅಲ್ಲಿಯ ಹಿಂದುಗಳ ರಕ್ಷಣೆ ಮಾಡಿ ಸರ್ವಧರ್ಮಕ್ಕೆ ಗೌರವ ನೀಡಿದ ಮಹಾನ್ ನಾಯಕ ಎಂದು ತಿಳಿಸಿದರು.
    ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಭೀಮಸಿ ಕಲಾದಗಿ ಮಾತನಾಡಿ, ಟಿಪ್ಪ್ಪು ಸುಲ್ತಾನ್ ದೇಶದ ಸ್ವಾತಂತ್ರೃಕ್ಕಾಗಿ ತನ್ನ ಎರಡು ಮಕ್ಕಳನ್ನು ಬ್ರಿಟಿಷರಲ್ಲಿ ಒತ್ತೆ ಇಟ್ಟ ಮಹಾನ್ ನಾಯಕ ಹಾಗೂ ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕಾಪಾಡಿದ ದೇಶಭಕ್ತ ಎಂದು ತಿಳಿಸಿದರು.
    ಜಾತ್ಯತೀತ ನಾಯಕ ಟಿಪ್ಪು ಸುಲ್ತಾನ್ ಅವರ ಜೀವನ ಚರಿತ್ರೆಯನ್ನು ಎಲ್ಲೆಡೆ ಪ್ರಚಾರ ಪಡಿಸುವ, ಆದರ್ಶಗಳನ್ನು ಮನೆ ಮನೆಗೆ ತಲುಪಿಸುವ ಕೆಲಸವನ್ನು ಟಿಪ್ಪು ಸುಲ್ತಾನ್ ಅಭಿಮಾನಿಗಳು ಮಾಡಬೇಕಾಗಿದೆ ಎಂದರು.
    ಸಾಮಾಜಿಕ ಹೋರಾಟಗಾರ ಮಹ್ಮದ್ ರ್ಇಾನ್ ಶೇಖ್, ಸದಾನಂದ ಮೋದಿ, ಸುರೇಖಾ ರಜಪೂತ, ಜಾರ್ ಕಲಾದಗಿ, ಅಜೇಯ್ ಹಜಾರೆ, ಅಲ್ಲಾಪೀರ್, ಹಾಜಿ ನದ್ಾ, ಆಸ್ಿ ಮುಳಸಾವಳಗಿ, ಮೊಹ್ಮದ್ ಹನ್ನಾನ್ ಶೇಖ್ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts