ಮಂಗಳೂರು: 35ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪ್ರಶಸ್ತಿ ನೀಡುವ ಪ್ರಶಸ್ತಿಗಳನ್ನು ಮಾಧ್ಯಮ ಮತ್ತು ಗಣ್ಯರಿಗೆ ಪ್ರದಾನ ಮಾಡಲಾಯಿತು.
ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪ್ರಶಸ್ತಿ ವಿತರಣೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದ್ದು, ವಿಜಯವಾಣಿ, ದಿಗ್ವಿಜಯ ನ್ಯೂಸ್ನ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಿಜಯವಾಣಿಯ ಹಿರಿಯ ವರದಿಗಾರ ಶ್ರೀಕಾಂತ್ ಶೇಷಾದ್ರಿಗೆ ಎಚ್.ಎಸ್ ರಂಗಸ್ವಾಮಿ ಪ್ರಶಸ್ತಿ, ವಿಜಯಪುರ ವರದಿಗಾರ ಶಶಿಕಾಂತ್ ಮಂಡೇಗಾರಗೆ ಮಂಡಿಬೆಲೆ ಶಾಮಣ್ಣ ಪ್ರಶಸ್ತಿ, ವರದಿಗಾರ್ತಿ ಕೆ.ಎಂ ಪಂಕಜಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ, ಅತ್ಯುತ್ತಮ ಪುಟ ವಿನ್ಯಾಸ ಮಾಡಿದ ನವೀನ್ ಕುಮಾರ್ಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಅದ್ದೂರಿ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸೇರಿ ಅನೇಕ ಗಣ್ಯರು ಉಪಸ್ಥಿತಿತರಿದ್ದರು.
ನಾರಿಶಕ್ತಿಗೆ ವಿಜಯವಾಣಿ ದಿಗ್ವಿಜಯ ನ್ಯೂಸ್ ನಮನ; ಐವರು ಅನುಪಮ ಸಾಧಕಿಯರಿಗೆ ವರ್ಷದ ಮಹಿಳೆ-2020 ಪ್ರಶಸ್ತಿ