More

    ಜನಮತ| ವಿದ್ಯಾರ್ಥಿಗಳಲ್ಲಿ ತಾರತಮ್ಯವೇಕೆ?

    ವಿಶ್ವವಿದ್ಯಾಲಯಗಳು ನಡೆಸುವ ಘಟಿಕೋತ್ಸವ ಸಮಾರಂಭದಲ್ಲಿ ಪದವೀಧರರಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ಹಾಗೂ ಪದಕ ನೀಡಿ ಗೌರವಿಸುವುದು ಅಭಿನಂದನಾರ್ಹ. ಜೊತೆಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದೊಂದಿಗೆ ನಗದು ಪುರಸ್ಕಾರ ನೀಡಿ ಪ್ರೋತ್ಸಾಹಿಸುವುದು ಕೂಡ ಸ್ವಾಗತಾರ್ಹ. ಆದರೆ ಬಡತನದ ಬೇಗೆಯಲ್ಲಿ ಬಳಲುತ್ತಿರುವ ಹಾಗೂ ಅಲ್ಲಿ ಇಲ್ಲಿ ಕೆಲಸ ಮಾಡಿಕೊಂಡು ಕಷ್ಟಪಟ್ಟು ಓದುವ ವಿದ್ಯಾರ್ಥಿಗಳು ಎಲ್ಲ ಸಮುದಾಯಗಳಲ್ಲೂ ಇದ್ದಾರೆ. ಹೀಗಿರುವಾಗ ವಿದ್ಯಾರ್ಥಿಗಳಲ್ಲಿ ತಾರತಮ್ಯ ಮಾಡುವುದು ಸರಿಯೇ? ಪ್ರಥಮ ಹಾಗೂ ದ್ವಿತೀಯ ದರ್ಜೆ(ರ್ಯಾಂಕ್)ಯಲ್ಲಿ ಪಾಸಾದ ಯಾವುದೇ ಸಮುದಾಯದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಕೊಡು ವುದು ಅಗತ್ಯ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಲಿ.
    | ಪ್ರೀತಿ ಟಿ.ಎಸ್. ದಾವಣಗೆರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts