More

    VIDEO: ವಿದ್ಯಾರ್ಥಿಗಳೇ ಚಿಂತೆ ಬಿಟ್ಟು ಓದಿನೆಡೆಗೆ ಗಮನಹರಿಸಿ: ವಿಜಯವಾಣಿ ಫೋನ್​ ಇನ್​ ಕಾರ್ಯಕ್ರಮದಲ್ಲಿ ಪ್ರೊ.ಸಿದ್ದು ಅಲಗೂರು

    ಬಳ್ಳಾರಿ: ಲಾಕ್‌ಡೌನ್ ಮುಗಿದ ತಕ್ಷಣ ತರಗತಿ ಪ್ರಾರಂಭಿಸಿಯೇ ಪರೀಕ್ಷೆ ತೆಗೆದುಕೊಳ್ಳಲಾಗುವುದು.ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಎದೆಗುಂದದೆ ಓದಿನ ಕಡೆಗೆ ಚಿತ್ತಹರಿಸಿ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿದ್ದು ಅಲಗೂರು ಹೇಳಿದರು.

    ಇದನ್ನೂ ಓದಿ: ಎಚ್ಚರಿಕೆಯಿಂದ ಇರಿ – ಮೊಟ್ಟೆಗಳನ್ನು ನೋಡಿ ಬೆಚ್ಚಿ ಬಿದ್ದ ಜುವೆಲ್ಲರಿ ಶಾಪ್ ಮಾಲೀಕ !

    ನಗರದ ವಿಜಯವಾಣಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಿದರು.ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯಿಂದ ಕರೆ ಮಾಡಿದ್ದ ಪ್ರತಿಯೊಂದು ವಿದ್ಯಾರ್ಥಿಯು ಪ್ರಮುಖವಾಗಿ ತರಗತಿ ಯಾವಾಗ ಆರಂಭವಾಗಲಿದೆ.ಪರೀಕ್ಷೆ ಯಾವಾಗ ತೆಗೆದುಕೊಳ್ಳುತ್ತೀರಿ..? ಲಾಕ್ ಡೌನ್ ಮುಗಿದ ತಕ್ಷಣ ತರಗತಿ ನಡೆಸಿದರೇ ಅನುಕೂಲವಾಗುತ್ತದೆ ಎಂದು ಕುಲಪತಿಗಳ ಬಳಿ ಅವಲತ್ತುಕೊಂಡರು.

    ಇದನ್ನೂ ಓದಿ:  PHOTOS: ಕಾಂಗೋ ಗೊರಿಲ್ಲಾಗಳ 12 ರಕ್ಷಕರನ್ನೇ ಕೊಂದು ಹಾಕಿದ್ರು ಬಂಡುಕೋರರು!

    ಕುಲಪತಿ ಪ್ರೊ.ಸಿದ್ದು ಅಲಗೂರು ಕೂಡ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸಮಾಧಾನದಿಂದ ಉತ್ತರಿಸಿವಿದ್ಯಾರ್ಥಿಗಳಲ್ಲಿದ್ದ ಭಯವನ್ನು ಹೋಗಲಾಡಿಸಿ ಧೈರ್ಯ ತುಂಬಿದರು.ಬೆಳಗ್ಗೆ 11ಗಂಟೆಗೆ ಆರಂಭವಾದ ಫೋನ್ ಇನ್ ಕಾರ್ಯಕ್ರಮದಲ್ಲಿ ಬಿಡುವಿಲ್ಲದ ಕರೆಗಳಿಗೆ ಕುಲಪತಿಗಳು ಉತ್ತರಿಸಿದರು.ಕುಲಸಚಿವರಾದ ತುಳಸಿಮಾಲಾ, ರಮೇಶ ಕೂಡ ಕುಲಪತಿಗಳ ಜತೆ ಪಾಲ್ಗೊಂಡು ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿದರು.

    ವಿಜಯವಾಣಿ ಫೋನ್​ ಇನ್​ ಕಾರ್ಯಕ್ರಮ

    ವಿಜಯವಾಣಿ ಫೋನ್​ ಇನ್​ ಕಾರ್ಯಕ್ರಮದಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿದ್ದು ಅಲಗೂರು

    Vijayavani ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಗುರುವಾರ, ಮೇ 7, 2020

    ವಿಜಯವಾಣಿ ಫೋನ್​ ಇನ್​ ಕಾರ್ಯಕ್ರಮ

    ವಿಜಯವಾಣಿ ಫೋನ್​ ಇನ್​ ಕಾರ್ಯಕ್ರಮದಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿದ್ದು ಅಲಗೂರು

    Vijayavani ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಗುರುವಾರ, ಮೇ 7, 2020

    ವಿಷಾನಿಲ ಅವಘಡದ ಬಗ್ಗೆ ಈಗ ಹೇಳಿಕೆ ಬಿಡುಗಡೆ ಮಾಡಿದ ಎಲ್​​ಜಿ ಪಾಲಿಮರ್ಸ್​ ಕೆಮಿಕಲ್​ ಫ್ಯಾಕ್ಟರಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts