More

    ನಾಪೋಕ್ಲುವಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

    • ಮಡಿಕೇರಿ: ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಅಂಗವಾಗಿ ಶುಕ್ರವಾರ ಇಲ್ಲಿನ ಸಂತೆ ಮೈದಾನದಲ್ಲಿ ಸಾರ್ವಜನಿಕರಿಗೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ನೀಡಲಾಯಿತು.
      ನಾಪೋಕ್ಲು ಹಾಗೂ ಹೊದ್ದೂರು ಗ್ರಾಮ ಪಂಚಾಯಿತಿಗಳಲ್ಲಿ ಯಾತ್ರೆ ನಡೆದಿದ್ದು ಜನರಿಗೆ ಆಯುಷ್ಮಾನ್ ಭಾರತ, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ, ದೀನ್ ದಯಾಳ್ ಅಂತ್ಯೋದಯ ಯೋಜನೆ, ಪ್ರಧಾನಮಂತ್ರಿ ಆವಾಸ್ ಯೋಜನೆ, ಉಜ್ವಲ, ವಿಶ್ವಕರ್ಮ ಯೋಜನೆ, ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್,ಪೋಷಣ್ ಅಭಿಯಾನ್ ಜಲಜೀವನ್ ಮಿಷನ್ ಯೋಜನೆ, ಜೀವನ್‌ಜ್ಯೋತಿ ವಿಮಾ ಯೋಜನೆ, ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಪ್ರಧಾನಮಂತ್ರಿ ಪ್ರಣಾಮ ಯೋಜನೆಗಳ ಬಗ್ಗೆ ವಿವಿಧ ಇಲಾಖೆ ಹಾಗೂ ಬ್ಯಾಂಕಿನ ಅಧಿಕಾರಿಗಳು ಯೋಜನೆಯ ಸಮಗ್ರ ಮಾಹಿತಿ ಒದಗಿಸಿದರು.
      ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ 5 ಅರ್ಹ ಫಲಾನುಭವಿಗಳಿಗೆ ಅಡುಗೆ ಅನಿಲ ಸಂಪರ್ಕವನ್ನು ನೀಡಲಾಯಿತು. ಈ ಸಂದರ್ಭ ವಿವಿಧ ಯೋಜನೆಯ ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರೈತರಿಗೆ ಅನುಕೂಲವಾಗುವ ಕಿಸಾನ್ ಡ್ರೋನ್ ಪ್ರದರ್ಶನ ಗಮನ ಸೆಳೆಯಿತು. ಪ್ರದರ್ಶನ ವ್ಯಾನ್‌ನಲ್ಲಿ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಪ್ರದರ್ಶಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಾರ್ವಜನಿಕರಿಗೆ ಉಚಿತವಾಗಿ ಕ್ಯಾಲೆಂಡರ್, ಮಾಹಿತಿ ಕೈಪಿಡಿಗಳನ್ನು ವಿತರಿಸಲಾಯಿತು.
      ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷ ಕುಲ್ಲೆಟೀರ ಹೇಮಾ ಅರುಣ್, ಲೀಡ್ ಬ್ಯಾಂಕ್ ಜಿಲ್ಲಾ ಪ್ರಭಾರ ಅಧಿಕಾರಿ ಸಿದ್ದರಾಮಯ್ಯ, ಕಾಫಿ ಬೋರ್ಡ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ (ಆಆ) ಚಂದ್ರಶೇಖರ್, ಕೆನರಾ ಬ್ಯಾಂಕ್ ವಲಯ ಮುಖ್ಯಸ್ಥ ರಾಜೇಶ್‌ಕುಮಾರ್, ನಬಾರ್ಡ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ ರಮೇಶ್ ಬಾಬು, ಭಾರತ್ ಪೆಟ್ರೋಲಿಯಂ ಅಧಿಕಾರಿ ನಿತಿನ್, ಕೆವಿಕೆ ಅಧಿಕಾರಿ ಸುರೇಶ್, ಲೀಡ್ ಬ್ಯಾಂಕ್ ಜಿಲ್ಲಾ ನೋಡಲ್ ಅಧಿಕಾರಿ ಗಂಗಾಧರ ನಾಯಕ್ ಉಪಸ್ಥಿತರಿದ್ದರು.
      ಸಮೀಪದ ಬಲ್ಲಮಾವಟಿ ಗ್ರಾಮದಲ್ಲೂ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಂಗವಾಗಿ ಗುರುವಾರ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಶನಿವಾರ ಬೇಂಗೂರು ಮತ್ತು ಬೆಟ್ಟಗೇರಿ ಗ್ರಾಮ ಪಂಚಾಯಿತಿಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಸಂಚರಿಸಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts