More

    ‘ವಿಕ್ರಾಂತ್ ರೋಣ’ ಬಿಡುಗಡೆ ಮತ್ತೆ ಮುಂದಕ್ಕೆ: ಮುಂದಿನ ದಿನಾಂಕ…

    ಬೆಂಗಳೂರು: ಎಲ್ಲವೂ ಅಂದುಕೊಂಡಂತೆಯೇ ಆಗಿದ್ದಿದ್ದರೆ ಕಿಚ್ಚ ಸುದೀಪ್ ಅಭಿನಯ, ಅನೂಪ್ ಭಂಡಾರಿ ನಿರ್ದೇಶನ, ಜಾಕ್ ಮಂಜು ನಿರ್ಮಾಣದ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ವಿಕ್ರಾಂತ್ ರೋಣ’ ಕಳೆದ ವರ್ಷವೇ ಬಿಡುಗಡೆ ಆಗಿರುತ್ತಿತ್ತು. ಆದರೆ ಕರೊನಾ ಕಾಟದಿಂದಾಗಿ ಸಿನಿಮಾ ಬಿಡುಗಡೆ ಮುಂದೂಡಲಾಗಿತ್ತು. ಇದೀಗ ಮತ್ತೊಮ್ಮೆ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿರುವುದನ್ನು ಚಿತ್ರತಂಡ ಹೇಳಿಕೊಂಡಿದೆ.

    2021ರ ಆಗಸ್ಟ್​ 19ರಂದು ಬಿಡುಗಡೆ ಆಗಬೇಕಿದ್ದ ಸಿನಿಮಾ ಕರೊನಾ ಲಾಕ್​ಡೌನ್ ಮತ್ತು ಕರೊನಾ ನಂತರದ ಚಿತ್ರಮಂದಿರದ ಮೇಲಿನ ನಿರ್ಬಂಧದಿಂದಾಗಿ ಅಂದು ಬಿಡುಗಡೆ ಆಗಿರಲಿಲ್ಲ. ಹಾಗೆ ಮುಂದೂಡಲ್ಪಟ್ಟ ಬಿಡುಗಡೆ ಫೆ. 24ಕ್ಕೆ ನೆರವೇರಲಿದೆ ಎಂದು ಚಿತ್ರತಂಡ ಘೋಷಿಸಿತ್ತು.

    ಇದನ್ನೂ ಓದಿ: ‘ಇವತ್ತು ಹುಟ್ಟಿದ ದಿನ, ಬೇಡ..’ ಎಂದರೂ ಕೇಳದೆ ಮನೆಯಿಂದ ಹೋದಳು: ಜನ್ಮದಿನವೇ ಸಾವಿನ ದಿನವಾಯ್ತು!

    ಇದೀಗ ಫೆ. 24ಕ್ಕೂ ಸಿನಿಮಾ ಬಿಡುಗಡೆ ಆಗುವುದಿಲ್ಲ ಎಂಬುದನ್ನು ಚಿತ್ರತಂಡ ಹೇಳಿಕೊಂಡಿದೆ. ‘ನಿಮ್ಮ ಕನಸನ್ನು ಫೆ. 24ರಂದು ನಿಮ್ಮ ಮುಂದೆ ತರಲು ನಾವು ಉತ್ಸುಕರಾಗಿದ್ದರೂ, ಪ್ರಸ್ತುತ ಕೋವಿಡ್​ ಪರಿಸ್ಥಿತಿ ಹಾಗೂ ಅದಕ್ಕೆ ಸಂಬಂಧಿತ ನಿಯಮಾವಳಿಗಳು ಪ್ರಪಂಚಾದ್ಯಂತ ನಮ್ಮ ಸಿನಿಮಾವನ್ನು ತಲುಪಿಸಲು ಅನುಕೂಲಕರವಾಗಿಲ್ಲ’ ಎಂದು ಹೇಳಿಕೊಂಡಿರುವ ಚಿತ್ರತಂಡ ಸಿನಿಮಾ ಬಿಡುಗಡೆ ಮಾಡಿರುವುದಾಗಿ ಹೇಳಿಕೊಂಡಿದೆ.

    ‘ವಿಕ್ರಾಂತ ರೋಣ’ ಬಿಡುಗಡೆ ದಿನಾಂಕ ಯಾವುದು ಎಂಬ ಬಗ್ಗೆ ನಿರ್ದೇಶಕ ಅನೂಪ್ ಭಂಡಾರಿ ಈ ರೀತಿ ಮಾಹಿತಿ ಹಂಚಿಕೊಂಡಿದ್ದಾರೆ.

    'ವಿಕ್ರಾಂತ್ ರೋಣ' ಬಿಡುಗಡೆ ಮತ್ತೆ ಮುಂದಕ್ಕೆ: ಮುಂದಿನ ದಿನಾಂಕ...

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts